ಆ್ಯಪ್ನಗರ

Basavaraj Bommai: ಭದ್ರಾವತಿಯ VISL ಉಳಿಸಲು ಎಲ್ಲ ಪ್ರಯತ್ನ; ರಾಜಕೀಯ ಬೆರೆಸುವ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿ

Basavaraj Bommai on VISL Bhadravati: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ, ಭದ್ರಾವತಿಯ ಉಸಿರಾಗಿರುವ ವಿಐಎಸ್‌ಎಲ್‌ ಕಾರ್ಖಾನೆಯನ್ನು ಉಳಿಸಲು ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಐಎಸ್ಎಲ್ ವಿಚಾರದಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ. ಎಲ್ಲ ವಿವರಗಳೊಂದಿಗೆ ಸಭೆ ಕರೆದು ಕೇಂದ್ರಕ್ಕೆ ಕಳಿಸುತ್ತೇವೆ. ವಿಐಎಸ್‌ಎಲ್‌ ಸಮಸ್ಯೆಯನ್ನು ತಾತ್ವಿಕವಾಗಿ ಬಗೆಹರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Edited byಅವಿನಾಶ ವಗರನಾಳ | Lipi 8 Feb 2023, 6:14 pm

ಹೈಲೈಟ್ಸ್‌:


  • ಭದ್ರಾವತಿಯ VISL ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ ಎಂದ ಸಿಎಂ
  • ವಿಐಎಸ್‌ಎಲ್‌ ವಿಚಾರದಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿ
  • ಸಭೆ ಕರೆದು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡುತ್ತೇವೆ, ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Basavaraj Bommai
ಬಸವರಾಜ ಬೊಮ್ಮಾಯಿ, ಸಿಎಂ (ಸಂಗ್ರಹ ಚಿತ್ರ)
ಶಿವಮೊಗ್ಗ: ವಿಐಎಸ್ಎಲ್ ವಿಚಾರದಲ್ಲಿ ರಾಜಕೀಯ ಬೆರಸುವ ಅವಶ್ಯಕತೆ ಇಲ್ಲ. ಎಲ್ಲ ವಿವರಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ಕರೆದು ಕೇಂದ್ರಕ್ಕೆ ಕಳಿಸುತ್ತೇವೆ. ವಿಐಎಸ್ಎಲ್ ಸಮಸ್ಯೆಯನ್ನು ತಾತ್ವಿಕವಾಗಿ ಬಗೆಹರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮಗೆ ಕಾರ್ಮಿಕರ ಕಾಳಜಿ ಹಾಗೂ ಕಾರ್ಖಾನೆ ಲಾಭದಲ್ಲಿ ಸಾಗಬೇಕು ಎಂಬ ಉದ್ದೇಶ ಇದೆ. ಖಾಸಗಿ ವಲಯದವರ ಜೊತೆಯಲ್ಲೂ ಮಾತನಾಡುತ್ತೇನೆ‌. ಕೆಲವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ವಿಐಎಸ್‌ಎಲ್ ಕಾರ್ಖಾನೆ ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ ಹಾಗೂ ನಿಯೋಗದ ಜೊತೆ ನಾನು ಮಾತನಾಡಲಿದ್ದೇನೆ. ಕೇಂದ್ರದ ಸಚಿವರಿಗೂ ಕೂಡ ಮಾಹಿತಿ ರವಾನೆ ಮಾಡಲಾಗಿದೆ. ಇದೇ ವಾರದಲ್ಲಿ ಸಭೆ ಕರೆಯುತ್ತೇನೆ. ಪರಿಹಾರ ಕೊಡುವಂತಹ ಕೆಲಸವನ್ನು ಮಾಡುತ್ತೇವೆ ಸಭೆಯಲ್ಲಿ ಕೆಲ ನಿರ್ಣಯ ತೆಗೆದುಕೊಂಡು ಕೇಂದ್ರಕ್ಕೆ ಕಳಿಸುತ್ತೇವೆ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ, ಶಿಲಾನ್ಯಾಸ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದರು. ಶರಾವತಿ ಸಂತ್ರಸ್ತರಿಗೆ ಅದಷ್ಟು ಬೇಗ ಪರಿಹಾರ ಸಿಗುತ್ತದೆ. ಅದರ ಪ್ರಸ್ತಾವನೆಯನ್ನು ಕೂಡ ಕಳಿಸಲಾಗಿದೆ. ಬಹಳ ವರ್ಷದ ಸಮಸ್ಯೆಗೆ ಪರಿಹಾರ ಅಂತಿಮ‌ ಪರಿಹಾರ ಸಿಗಲಿದೆ ಎಂದು ಹೇಳಿದರು.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಬ್ರಾಹ್ಮಣ ಸಿಎಂ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಜಾತಿ ಆಧಾರಿತ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ನಾಡು ಸ್ಥಾಪನೆಯಾಗಿ ಎಪ್ಪತ್ತೈದು ವರ್ಷಗಳಾದವು. ಜನ ಜಾತಿ, ವೈಯಕ್ತಿಕತೆ ಮೇಲೆ ಕಿಮ್ಮತ್ ಕೊಡೋದಿಲ್ಲ. ಹೀಗೆ ತಳಮಟ್ಟಕ್ಕೆ ಹೋಗಿ ಮಾತನಾಡುವುದನ್ನು ಜನ ಇಷ್ಟಪಡುವುದಿಲ್ಲ. ಮೊದಲನೇದಾಗಿ ಹೀಗೆ ಮಾತನಾಡಬಾರದು ಹಾಗೂ ಇಂತಹ ಮಾತುಗಳಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ ಎಂದರು.

ಬಿಜೆಪಿ ತೊರೆಯಲು ಸಿದ್ಧರಿದ್ದ ಯಡಿಯೂರಪ್ಪನವರಿಗೆ ನಾನೇ ಬುದ್ಧಿವಾದ ಹೇಳಿದ್ದು: ಕುಮಾರಸ್ವಾಮಿ
ಜನ ನಮ್ಮ ಕೆಲಸ, ಅಧಿಕಾರದ ಅಧಾರದ ಮೇಲೆ ಮತ ಹಾಕುತ್ತಾರೆ. ಮತದಾರರು ಈಗ ಪ್ರಬುದ್ಧರಾಗಿದ್ದಾರೆ. ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಭೂಕಂಪದಲ್ಲಿ ಸಿಲುಕಿದವರ ಬಗ್ಗೆ ಮಾಹಿತಿ ಇಲ್ಲ, ವಿದೇಶಾಂಗ ಸಚಿವಾಲಯದ ಜತೆ ಸಂಪರ್ಕದಲ್ಲಿದ್ದೇವೆ. ಸಾರ್ವಜನಿಕರಿಗೂ ಮಾಹಿತಿ ನೀಡಲು ಕೋರಿದ್ದೇವೆ. ನೋಡಲ್ ಅಧಿಕಾರಿ ನೇಮಕ ಇಲ್ಲ. ದಿಲ್ಲಿಯಲ್ಲಿರುವ ಕರ್ನಾಟಕ ಕಮಿಷನರ್ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

Bhadravati Constituency: ಬಿಜೆಪಿಗೆ ಕಬ್ಬಿಣದ ಕಡಲೆಯಾದ ಭದ್ರಾವತಿ: ಗೆಲುವನ್ನೇ ಕಾಣದ ಕಣದಲ್ಲಿ ದಿಗ್ವಿಜಯಕ್ಕೆ ಕೇಸರಿ ಪಡೆ ರಣತಂತ್ರ
ಸಿಎಂಗೆ ಮನವಿಗಳ ಮಹಾಪೂರ!
ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರಿಗೆ ವಿವಿಧ ಸಂಘಟನೆಗಳಿಂದ ಮನವಿಗಳನ್ನು ಸಲ್ಲಿಸಲಾಯಿತು. ಹೆಲಿಪ್ಯಾಡ್‌ನಿಂದ ಪ್ರವಾಸಿ ಮಂದಿರಕ್ಕೆ ಬಂದ ಸಿಎಂ ಅವರಿಗೆ ಮನವಿಗಳನ್ನು ಸ್ವೀಕರಿಸುವುದಕ್ಕೆ ಪ್ರತ್ಯೇಕ ಸ್ಥಳದ ವ್ಯವಸ್ಥೆ ಮಾಡಲಾಗಿತ್ತು. ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿಎಸ್‌ ಯಡಿಯೂರಪ್ಪ, ಸಂಸದ ಬಿವೈ ರಾಘವೇಂದ್ರ, ಶಾಸಕ ಕೆಎಸ್‌ ಈಶ್ವರಪ್ಪ ಸೇರಿ ಪ್ರಮುಖರು ಸೇರಿ ಒಂದು ಸುತ್ತಿನ ಸಭೆ ನಡೆಸಿ ಬಳಿಕ ಮನವಿಯನ್ನು ಸ್ವೀಕರಿಸಿದರು.

VISL Bhadravati: ಎಂಪಿಎಂ ಆಯ್ತು ಈಗ ವಿಐಎಸ್‌ಎಲ್‌ ಸರದಿ; ಉಕ್ಕಿನ ನಗರಿ ಭದ್ರಾವತಿಯ ಉಸಿರು ಉಳಿಸಿ!
* ಸಂಯುಕ್ತ ಜನತಾದಳ: ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಯನ್ನು ರಾಜ್ಯ ಸರಕಾರದ ವ್ಯಾಪ್ತಿಗೆ ಒಳಪಡಿಸಬೇಕು ಇಲ್ಲವೇ ಕೇಂದ್ರ ಸರಕಾರವೇ ಬಂಡವಾಳ ಹಾಕಿ ಪುನಾರಂಭಿಸಬೇಕು ಎಂದು ಸಂಯುಕ್ತ ಜನತಾ ದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್‌ ಅವರು ಮನವಿ ಮಾಡಿದರು.

* ಮಲೆನಾಡು ರೈತರ ಹೋರಾಟ ಸಮಿತಿ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮತ್ತು ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಮಲೆನಾಡು ರೈತರ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್‌, ಸಹ ಸಂಚಾಲಕ ಎಸ್‌.ಕೃಷ್ಣಮೂರ್ತಿ, ಪ್ರಮುಖರಾದ ಧರ್ಮೇಂದ್ರ ಶಿರುವಾಳ, ಸಿ.ಡಿ.ಪರಶುರಾಮ್‌ ಇತರರಿದ್ದರು.


* ರಾಜ್ಯ ಗ್ರಾಮ ಪಂಚಾಯಿತಿ , ತಾಲೂಕು ಪಂಚಾಯಿತಿ, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಕ್ಷೇಮಾಭಿವೃದ್ಧಿ ಒಕ್ಕೂಟ: ಶಾಶ್ವತವಾಗಿ ಒಂದು ಗುರುತಿನ ಚೀಟಿ, ಮಾಸಿಕ ಮಾಸಾಶನ 5 ಸಾವಿರ ರೂ. ನೀಡಬೇಕು. ಆರೋಗ್ಯ ವಿಮೆ, ಮಕ್ಕಳ ವಿದ್ಯಾಭ್ಯಾಸಕ್ಕೆ ರಿಯಾಯಿತಿ ಕಲ್ಪಿಸಬೇಕು ಹೀಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು. ಒಕ್ಕೂಟದ ಮಂಜುನಾಥ್‌, ಶಾಂತಕುಮಾರ್‌, ರಾಜಾನಾಯ್‌್ಕ ಇತರರಿದ್ದರು.

* ಏರ್‌ಪೋರ್ಟ್‌ಗೆ ಯಡಿಯೂರಪ್ಪ ಹೆಸರಿಡಿ: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಮನವಿ ಪತ್ರಗಳನ್ನು ಸ್ವೀಕರಿಸುತ್ತಿದ್ದಾಗಲೇ ಕೆಲವು ಹೋರಾಟಗಾರರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅವಿರತ ಶ್ರಮ ವಹಿಸಿರುವ ಬಿ.ಎಸ್‌.ಯಡಿಯೂರಪ್ಪ ಅವರ ಹೆಸರನ್ನೇ ಇಡಬೇಕು ಎಂದು ಒತ್ತಾಯಿಸಿದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ