ಆ್ಯಪ್ನಗರ

ಬಜೆಟ್‌ನಲ್ಲಿ ಕೃಷಿ, ನೀರಾವರಿಗೆ ಹೆಚ್ಚಿನ ಆದ್ಯತೆ: ಸಿಎಂ ಯಡಿಯೂರಪ್ಪ

ಈ ಸಲದ ರಾಜ್ಯ ಬಜೆಟ್‌ನಲ್ಲಿ ಕೃಷಿ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಮಾರ್ಚ್‌ 5ರಂದು ಬಜೆಟ್‌ ಮಂಡನೆ ಮಾಡಲಿದ್ದು, ಅದಕ್ಕೆ ಪೂರ್ವಭಾವಿ ಸಿದ್ಧತೆ ಆಗಿದೆ ಎಂದರು. ​​ಹಣಕಾಸಿನ ಸ್ಥಿತಿ ನೋಡಿಕೊಂಡು, ಇತಿಮಿತಿಯೊಳಗೆ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದ ಅವರು, ನಾಳೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದೇನೆ. ಸೊರಬ ಹಾಗೂ ಶಿಕಾರಿಪುರದಲ್ಲಿ ನೀರಾವರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದೇನೆ ಎಂದು ತಿಳಿಸಿದರು.

Vijaya Karnataka Web 23 Feb 2020, 6:07 pm
ಶಿವಮೊಗ್ಗ: ಈ ಸಲದ ರಾಜ್ಯ ಬಜೆಟ್‌ನಲ್ಲಿ ಕೃಷಿ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಾರ್ಚ್‌ 5ರಂದು ಬಜೆಟ್‌ ಮಂಡನೆ ಮಾಡಲಿದ್ದು, ಅದಕ್ಕೆ ಪೂರ್ವಭಾವಿ ಸಿದ್ಧತೆ ಆಗಿದೆ ಎಂದರು.
Vijaya Karnataka Web BSY


ಹಣಕಾಸಿನ ಸ್ಥಿತಿ ನೋಡಿಕೊಂಡು, ಇತಿಮಿತಿಯೊಳಗೆ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದ ಅವರು, ನಾಳೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದೇನೆ. ಸೊರಬ ಹಾಗೂ ಶಿಕಾರಿಪುರದಲ್ಲಿ ನೀರಾವರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದೇನೆ ಎಂದು ತಿಳಿಸಿದರು.

ಹೇಗಿರಲಿದೆ 36 ಗಂಟೆಗಳ ಟ್ರಂಪ್‌ ಇಂಡಿಯಾ ಟೂರ್‌..? ಯಾವೆಲ್ಲಾ ಸ್ಥಳಗಳಿಗೆ ಭೇಟಿ..?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ಮೂರುವರೆ ವರ್ಷದಲ್ಲಿ ಇನ್ನು ಅಭಿವೃದ್ಧಿ ಮಾಡುತ್ತೇವೆ. ಸಿಗಂದೂರು ಸೇತುವೆ ಕಾಮಗಾರಿ ಆರಂಭವಾಗಿದೆ ಎಂದರು.

ಕ್ಯಾಸಿನೊ ಬಂದರೆ ಜೂಜಾಟಕ್ಕೆ ಬಹಿರಂಗ ಬೆಂಬಲ ಕೊಟ್ಟಂತೆ, ಸಿದ್ದರಾಮಯ್ಯ ಕಿಡಿ

ಇನ್ನು, 15 ನೇ ಹಣಕಾಸು ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಕಡಿಮೆ ಅನುದಾನದ ಬಗ್ಗೆ ಮಾತನಾಡಿದ ಸಿಎಂ, ಈ ಬಗ್ಗೆ ಗಮನಹರಿಸಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ