ಆ್ಯಪ್ನಗರ

ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲು

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ)ಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿ ಗ್ರಾಮೀಣರ ಸಾವು ನೋವಿಗೆ ಕಾರಣವಾದ ಆಪಾದನೆ ಮೇಲೆ ಜಿಲ್ಲಾಡಳಿತದ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗವು(ಎಸ್‌ಎಚ್‌ಆರ್‌ಸಿ) ದೂರು ದಾಖಲಿಸಿಕೊಂಡಿದೆ.

Vijaya Karnataka 27 Jan 2019, 5:00 am
ಶಿವಮೊಗ್ಗ : ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ)ಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿ ಗ್ರಾಮೀಣರ ಸಾವು ನೋವಿಗೆ ಕಾರಣವಾದ ಆಪಾದನೆ ಮೇಲೆ ಜಿಲ್ಲಾಡಳಿತದ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗವು(ಎಸ್‌ಎಚ್‌ಆರ್‌ಸಿ) ದೂರು ದಾಖಲಿಸಿಕೊಂಡಿದೆ.
Vijaya Karnataka Web complaint filed in the human rights commission
ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲು


ಹಿಂದೆಂದೂ ಇಲ್ಲದಷ್ಟು ವ್ಯಾಪಕವಾಗಿ ಹರಡುತ್ತಿರುವ ಮಂಗನ ಕಾಯಿಲೆ ಬಗ್ಗೆ ಮುಂಜಾಗ್ರತೆ ವಹಿಸಿ ನಿಯಂತ್ರಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಜಿಲ್ಲಾಡಳಿತದ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದ ನಡುವೆಯೆ ಮಾನವ ಹಕ್ಕುಗಳ ಆಯೋಗವು ದಾಖಲಿಸಿಕೊಂಡಿರುವುದು ಜಿಲ್ಲಾಡಳಿತಕ್ಕೆ ಚಾಟಿ ಬೀಸಿದಂತಾಗಿದೆ. ಜಿಲ್ಲಾಡಳಿತದ ವೈಫಲ್ಯ ಮತ್ತು ಗ್ರಾಮೀಣ ಸಾವು ನೋವಿಗೆ ಸಂಬಂಧಿಸಿದಂತೆ ಕೆಎಫ್‌ಡಿ ಜನ ಜಾಗೃತಿ ಒಕ್ಕೂಟದ ಪರವಾಗಿ ಶಶಿ ಸಂಪಳ್ಳಿ ಅವರು ಆನ್‌ಲೈನ್‌ನಲ್ಲಿ ಮಾನ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರು ಅನ್ವಯ ಆಯೋಗವು ಪ್ರಕರಣ(ಕೇಸ್‌ ನಂ.375/10/182019) ದಾಖಲಿಸಿಕೊಂಡಿದೆ.

ಕೆಎಫ್‌ಡಿ ನಿಯಂತ್ರಿಸುವಲ್ಲಿ ವಿಫಲರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್‌ ಮತ್ತು ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯದ ಉಪ ನಿರ್ದೇಶಕ ಡಾ.ರವಿಕುಮಾರ್‌ ಅವರನ್ನು ರಾಜ್ಯ ಸರಕಾರವು ಇತ್ತೀಚೆಗಷ್ಟೆ ಸೇವೆಯಿಂದ ಅಮಾನತುಗೊಳಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ