ಆ್ಯಪ್ನಗರ

ಲಂಚಕ್ಕೆ ಒತ್ತಾಯಿಸಿದರೆ ಎಸಿಬಿಗೆ ದೂರು ನೀಡಿ

ಸರಕಾರಿ ನೌಕರರು ನ್ಯಾಯ ಸಮ್ಮತವಾಗಿ ಮಾಡಬೇಕಾದ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆಯಿಟ್ಟರೆ ಶಿವಮೊಗ್ಗದ ಭ್ರಷ್ಟಾಚಾರ ನಿಗ್ರಹ ದಳದ ಠಾಣೆ ಸಂಪರ್ಕಿಸುವಂತೆ ಎಸಿಬಿ ಇನ್ಸ್‌ಪೆಕ್ಟರ್‌ ಜೆ.ಎಸ್‌.ತಿಪ್ಪೇಸ್ವಾಮಿ ತಿಳಿಸಿದರು.

Vijaya Karnataka 9 Jun 2019, 5:00 am
ಹೊಳೆಹೊನ್ನೂರು: ಸರಕಾರಿ ನೌಕರರು ನ್ಯಾಯ ಸಮ್ಮತವಾಗಿ ಮಾಡಬೇಕಾದ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆಯಿಟ್ಟರೆ ಶಿವಮೊಗ್ಗದ ಭ್ರಷ್ಟಾಚಾರ ನಿಗ್ರಹ ದಳದ ಠಾಣೆ ಸಂಪರ್ಕಿಸುವಂತೆ ಎಸಿಬಿ ಇನ್ಸ್‌ಪೆಕ್ಟರ್‌ ಜೆ.ಎಸ್‌.ತಿಪ್ಪೇಸ್ವಾಮಿ ತಿಳಿಸಿದರು.
Vijaya Karnataka Web complaint to acb if forced to bribe
ಲಂಚಕ್ಕೆ ಒತ್ತಾಯಿಸಿದರೆ ಎಸಿಬಿಗೆ ದೂರು ನೀಡಿ


ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.

ಸಾರ್ವಜನಿಕ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಲಂಚ ಪಡೆಯುವುದು, ಲಂಚದ ರೂಪದಲ್ಲಿ ಬೇರೆ ಪ್ರತಿಫಲ ಪಡೆಯುವುದು, ತನ್ನ ಹುದ್ದೆ ಬಳಸಿಕೊಂಡು ಬೇರೆ ರೀತಿಯಲ್ಲಿ ಅವ್ಯವಹಾರ ನಡೆಸುವುದು, ಅಧಿಕಾರ ದುರ್ಬಳಕೆ ಮಾಡಿಕೊಳ್ಳುವುದು ಶಿಕ್ಷಾರ್ಹ ಅಪರಾಧ.

ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ದೂರು ಸಲ್ಲಿಸುವಾಗ ಯಾವುದಾದರೂ ಸಾಕ್ಷಿ ಹಾಗೂ ದಾಖಲೆ ಇದ್ದರೆ ಕಾನೂನು ಕ್ರಮ ಜರುಗಿಸಲು ಸಹಕಾರಿಯಾಗುತ್ತದೆ. ಈ ಬಗ್ಗೆ ಜನರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದರು.

ಸಭೆಯಲ್ಲಿ ಹಾಜರಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್‌.ಕೆ.ಶ್ರೀನಿವಾಸ್‌ ಮಾತನಾಡಿ,ಇಲ್ಲಿನ ಖಾಸಗಿ ಶಾಲೆಯಲ್ಲಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ. ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಲೇ ಔಟ್‌ ಮಾಡಿದ್ದಾರೆ. ಇದಕ್ಕೆ ಸ್ಥಳೀಯ ಪಂಚಾಯಿತಿಯವರು ಮಾಲೀಕರೊಂದಿಗೆ ಕೈ ಜೋಡಿಸಿದ್ದಾರೆ. ಈ ಬಗ್ಗೆ ಗಮನ ಹರಿಸಬೇಕೆಂದು ಕೋರಿದರು.

ಎಂ.ಹಾಲೇಶ್‌ ಅವರು ಮಾತನಾಡಿ, ಇಲ್ಲಿನ ಭಗೀರಥ ವೃತ್ತದ ಸರಕಾರಿ ಶಾಲೆ ಸುತ್ತಲು ಅಕ್ರಮವಾಗಿ ಗುಡಾರಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದಾರೆ. ಶಾಲೆ ಆವರಣದಲ್ಲಿ ವ್ಯಾಪಾರ ಮಾಡುವವರಿಂದ ಗ್ರಾಮ ಪಂಚಾಯಿತಿ ಹಣ ವಸೂಲಿ ಮಾಡುತ್ತಿದೆ. ವ್ಯಾಪಾರದಿಂದ ಶಾಲೆಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ತಕ್ಷ ಣ ತೆರವುಗೊಳಿಸಬೇಕೆಂದು ತಮ್ಮ ಅಹವಾಲು ತೋಡಿಕೊಂಡರು.

ಅಹವಾಲು ಸ್ವೀಕರಿಸಿ ಮಾತನಾಡಿದ ಎಸಿಬಿ ಇನ್ಸ್‌ಪೆಕ್ಟರ್‌, ಈ ಬಗ್ಗೆ ಪಂಚಾಯಿತಿಯಲ್ಲಿ ಸಭೆ ಸೇರಿ ನಿರ್ಣಯ ಕೈಗೊಂಡು 15 ದಿನದೊಳಗಾಗಿ ತೆರವು ಮಾಡುವಂತೆ ಸೂಚಿಸಿದರು.

ಗ್ರಾ.ಪಂ.ಅಧ್ಯಕ್ಷೆ ಮಮತಾ ಮಂಜುನಾಥ್‌ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ನರಸಿಂಹಮೂರ್ತಿ, ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು. ಪಿಡಿಒ ಎಸ್‌.ಪ್ರಕಾಶ್‌ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ