ಆ್ಯಪ್ನಗರ

ಅವಹೇಳನಕಾರಿ ಹೇಳಿಕೆ ಖಂಡಿಸಿ ಮನವಿ

ವೀರಶೈವ ಲಿಂಗಾಯಿತ ಸಮಾಜ ಹಾಗೂ ಶಿವನ ಬಗ್ಗೆ ದಾವಣಗೆರೆ ಜಿಪಂ ಮಾಜಿ ಅಧ್ಯಕ್ಷ ವೈ.ರಾಮಪ್ಪ ನೀಡಿದ್ದ ಅವಹೇಳನಕಾರಿ ಹೇಳಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ವೀರಶೈವ ಲಿಂಗಾಯಿತ ವೇದಿಕೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 26 Apr 2019, 5:00 am
ಶಿವಮೊಗ್ಗ: ವೀರಶೈವ ಲಿಂಗಾಯಿತ ಸಮಾಜ ಹಾಗೂ ಶಿವನ ಬಗ್ಗೆ ದಾವಣಗೆರೆ ಜಿಪಂ ಮಾಜಿ ಅಧ್ಯಕ್ಷ ವೈ.ರಾಮಪ್ಪ ನೀಡಿದ್ದ ಅವಹೇಳನಕಾರಿ ಹೇಳಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ವೀರಶೈವ ಲಿಂಗಾಯಿತ ವೇದಿಕೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web smr-25ganesh3


ದಾವಣಗೆರೆ ತಾಲೂಕು ನೇರ್ಲಿಗೆ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಮತದಾನ ಸಂದರ್ಭ ವೀರಶೈವ ಲಿಂಗಾಯಿತ ಸಮಾಜದ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವೈ.ರಾಮಪ್ಪ ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ವೇದಿಕೆ ಅಧ್ಯಕ್ಷ ಕೆ.ಎಂ.ಸತೀಶ್‌ಗೌಡ, ಕಾರಾರ‍ಯಧ್ಯಕ್ಷ ಎಚ್‌.ಕೆ.ರಾಜಶೇಖರ್‌, ಉಪಾಧ್ಯಕ್ಷ ಎಚ್‌.ಎಂ.ಸತೀಶ್‌, ಯುವರಾಜ್‌, ಜಗದೀಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ