ಆ್ಯಪ್ನಗರ

ರಾಷ್ಟ್ರಮಟ್ಟದ ಕ್ರೀಡೆ ಪದಕ ವಿಜೇತರಿಗೆ ಅಭಿನಂದನೆ

ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳಿಸಿದ ಜಿಲ್ಲೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್‌.ಕೆ.ಮೊಹಮ್ಮದ್‌ ಇಮ್ತಿಯಾಜ್‌ ಅಭಿನಂದಿಸಿದರು.

Vijaya Karnataka 24 Feb 2019, 5:00 am
ಶಿವಮೊಗ್ಗ: ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳಿಸಿದ ಜಿಲ್ಲೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್‌.ಕೆ.ಮೊಹಮ್ಮದ್‌ ಇಮ್ತಿಯಾಜ್‌ ಅಭಿನಂದಿಸಿದರು.
Vijaya Karnataka Web congratulations to the national sports medalists
ರಾಷ್ಟ್ರಮಟ್ಟದ ಕ್ರೀಡೆ ಪದಕ ವಿಜೇತರಿಗೆ ಅಭಿನಂದನೆ


ಸುದ್ದಿಗೋಷ್ಠಿಯಲ್ಲಿ ಶನಿವಾರ ಅವರು ಮಾತನಾಡಿ, ಸಾಗರ ಕಾಲೇಜಿನ ಚಂದನ್‌ ಯೋಗ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬಿಆರ್‌ಪಿಯ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ಕೆ.ಅಂಬಿಕಾ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ ಎಂದರು.

ಸಾಗರದ ಕೇಡಲಸರದ ರೂಪಶ್ರೀ ಪದವಿಪೂರ್ವ ಕಾಲೇಜಿನ ಎನ್‌.ಜಿ.ಚೈತ್ರ ಯೋಗ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಶಿಕಾರಿಪುರದ ಕುಮದ್ವತಿ ಪದವಿಪೂರ್ವ ಕಾಲೇಜಿನ ತನುಶ್ರೀ ಹಾಗೂ ಮಧು ಜೋಡೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ ಎಂದರು. ಸಾಗರದ ಕೇಡಲಸರದ ರೂಪಶ್ರೀ ಪದವಿ ಪೂರ್ವ ಕಾಲೇಜಿನ ಎಸ್‌.ನಿರ್ಮಲ ಯೋಗ ಸ್ಪರ್ಧೆಯಲ್ಲಿ ,ಶಿವಮೊಗ್ಗದ ಸರಕಾರಿ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್‌ ಶಫಿ ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಹಾಗೂ ಶಿಕಾರಿಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಸಂಗೀತ ಜೋಡೋ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ ಎಂದರು. ಗೋಷ್ಠಿಯಲ್ಲಿ ಜಿಲ್ಲಾ ಕ್ರೀಡಾ ಸಂಯೋಜಕ ಬಿ.ಸಿ.ನಾಗರಾಜ್‌, ಉಪನ್ಯಾಸಕ ಖಾನ್‌ ಸಾಬ್‌, ಪದಕ ಪಡೆದ ಕ್ರೀಡಾಪಟುಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ