ಆ್ಯಪ್ನಗರ

ಕಾಂಗ್ರೆಸ್‌ನಿಂದ ಹಿಂದುಳಿದವರಿಗೆ ಕೊಡುಗೆ ಏನು?

ನಗರದ ಕೊಳಚೆ ಪ್ರದೇಶದ ವಾಸಿಗಳಿಗೆ ಕೇವಲ ಭರವಸೆ ಭಾಗ್ಯ ನೀಡಿದ ಕಾಂಗ್ರೆಸ್‌ ಸರಕಾರ, ಹಕ್ಕುಪತ್ರ ಭಾಗ್ಯ ನೀಡುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

Vijaya Karnataka 27 Apr 2018, 5:00 am
ಶಿವಮೊಗ್ಗ : ನಗರದ ಕೊಳಚೆ ಪ್ರದೇಶದ ವಾಸಿಗಳಿಗೆ ಕೇವಲ ಭರವಸೆ ಭಾಗ್ಯ ನೀಡಿದ ಕಾಂಗ್ರೆಸ್‌ ಸರಕಾರ, ಹಕ್ಕುಪತ್ರ ಭಾಗ್ಯ ನೀಡುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಕುಟುಕಿದರು.
Vijaya Karnataka Web congress contribution to backward class what
ಕಾಂಗ್ರೆಸ್‌ನಿಂದ ಹಿಂದುಳಿದವರಿಗೆ ಕೊಡುಗೆ ಏನು?


ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ನೀಡಿದ ಆಶ್ವಾಸನೆಯಂತೆ ನಗರದ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರಿಗೆ ಹಕ್ಕುಪತ್ರ ವಿತರಿಸಿಲ್ಲ ಎಂದು ದೂರಿದರು.

ನಗರದ ಕೊಳಚೆ ಪ್ರದೇಶಗಳಲ್ಲಿ ಕಾಂಗ್ರೆಸ್‌ ಆಡಳಿತ ಬಗ್ಗೆ ಜನರಲ್ಲಿ ಅಸಮಾಧಾನ ಕಂಡುಬಂದಿದೆ. ಹೀಗಾಗಿ ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿದೆ. ಪ್ರವಾಹದಂತೆ ಹರಿದುಬರುತ್ತಿರುವ ಜನ ಬೆಂಬಲದಿಂದ ತಮ್ಮ ಗೆಲುವು ನಿಶ್ಚಿತ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಲಾಗುವುದು ಎಂದರು.

ಜಾತಿವಾದಿ ಸಿದ್ದರಾಮಯ್ಯ:

ಕುರುಬರು ಹೆಚ್ಚಿದ್ದಾರೆ ಎಂಬ ಕಾರಣಕ್ಕೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಸಿದ್ದರಾಮಯ್ಯ ಜಾತಿವಾದಿ ಅಲ್ಲದೇ ಬೇರೆನೂ ಅಲ್ಲ. ವೋಟಿಗಾಗಿ ಹಿಂದುಳಿದವರನ್ನು ಆಶ್ರಯಿಸುವ ಇವರು ಹಿಂದುಳಿದ ಜನಾಂಗಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಸ್ಪಷ್ಟಪಡಿಸಬೇಕು. ಮೋದಿ ರಾಷ್ಟ್ರೀಯವಾದಿ, ಸಿದ್ದರಾಮಯ್ಯ ಜಾತಿವಾದಿ ಎಂದರು.

ಮೋದಿ ಕರ್ನಾಟಕಕ್ಕೆ ಬಂದರೆ ಆಮದು ನಾಯಕ ಎಂದು ಕರೆಯುವ ಸಿದ್ದರಾಮಯ್ಯ ರಾಹುಲ್‌ಗಾಂಧಿಯನ್ನು ಏನೆಂದು ಕರೆಯುತ್ತಾರೆ. ಬಿಜೆಪಿಯಲ್ಲಿ ನಾಯಕರ ದಂಡೆ ಇದೆ. ಆದರೆ, ಕಾಂಗ್ರೆಸ್‌ಗೆ ರಾಹುಲ್‌ ಗಾಂಧಿ ಒಬ್ಬರೇ ನಾಯಕ. ಇವರು ಪ್ರಚಾರ ನಡೆಸಿದ ಕಡೆಯಲೆಲ್ಲ ಕಾಂಗ್ರೆಸ್‌ ಸೋತಿದೆ. ಹೀಗಾಗಿ ಕರ್ನಾಟಕಕ್ಕೆ ಬಂದು ಪ್ರಚಾರ ಮಾಡಿದರೆ ಬಿಜೆಪಿಗೇ ಅನುಕೂಲವಾಗಲಿದೆ ಎಂದು ವ್ಯಂಗ್ಯವಾಡಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಕಾರ್ಯ ವೈಖರಿ ಮೆಚ್ಚಿ ವಿವಿಧ ಪಕ್ಷ ಗಳ ಅನೇಕ ಮುಖಂಡರೊಂದಿಗೆ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಸೇರ್ಪಡೆಯಾಗುತ್ತಿರುವುದು ಪಕ್ಷ ಕ್ಕೆ ಇನ್ನಷ್ಟು ಶಕ್ತಿ ದೊರಕಿದಂತಾಗಿದೆ. ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್‌, ಜೆಡಿಎಸ್‌ನ ಪ್ರಮುಖ ನಾಯಕರು ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಬಿಜೆಪಿ ಗೆಲುವು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಂಸದ ಆಯನೂರು ಮಂಜುನಾಥ್‌ ಮಾತನಾಡಿ, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿಗಳೊಂದಿಗೆ ಟೆಲಿ ಸಂವಾದ ನಡೆಸಿದ್ದಾರೆ. ಚೀನಾ ಪ್ರವಾಸದ ನಂತರ ಚುನಾವಣಾ ಪ್ರಚಾರಕ್ಕೆಂದು ಕರ್ನಾಟಕಕ್ಕೆ ಆಗಮಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿರುವುದು ಪಕ್ಷ ದ ಕಾರ್ಯಕರ್ತರಿಗೆ ಸ್ಫೂರ್ತಿ ತಂದಿದೆ. ಮೋದಿ ಪ್ರವಾಸದ ನಂತರ ರಾಜ್ಯದಲ್ಲಿ ಬಿಜೆಪಿ ಪರ ಹೊಸ ಅಲೆ ಏಳಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರಮುಖರಾದ ಡಿ.ಎಸ್‌. ಅರುಣ್‌, ಬಿ.ಆರ್‌.ಮಧುಸೂದನ್‌, ಎಸ್‌.ಜ್ಞಾನೇಶ್ವರ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ