ಆ್ಯಪ್ನಗರ

ಕೆ.ಎಸ್. ಈಶ್ವರಪ್ಪ ಕುಟುಂಬಕ್ಕೂ ಕೊರೊನಾ ಭೀತಿ: ಮನೆ ಕೆಲಸದವನಿಗೆ ಸೋಂಕು ದೃಢ!

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಕುಟುಂಬಕ್ಕೂ ಕೊರೊನಾ ಸೋಂಕಿನ ಭೀತಿ ಎದುರಾಗಿದೆ. ಕೆ.ಎಸ್‌. ಈಶ್ವರಪ್ಪ ಅವರ ಮನೆಯಲ್ಲಿ ಹಸುವಿನ ಹಾಲು ಕರೆಯಲೆಂದು ಕೆಲಸಕ್ಕೆ ಬರುತ್ತಿದ್ದ ಕೃಷ್ಣ ಎಂಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

Vijaya Karnataka Web 14 Jul 2020, 12:07 pm
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಕುಟುಂಬಕ್ಕೂ ಕೊರೊನಾ ಸೋಂಕಿನ ಭೀತಿ ಎದುರಾಗಿದೆ.
Vijaya Karnataka Web KS eshwarappa


ಕೆ.ಎಸ್‌. ಈಶ್ವರಪ್ಪ ಅವರ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಕುಟುಂಬದ ಎಲ್ಲ ಸದಸ್ಯರೂ ಸೋಂಕಿನ ಭಯ ಹುಟ್ಟಿಕೊಂಡಿದೆ. ಕೆ.ಎಸ್‌. ಈಶ್ವರಪ್ಪ ಅವರ ಮನೆಯಲ್ಲಿ ಹಸುವಿನ ಹಾಲು ಕರೆಯಲೆಂದು ಕೆಲಸಕ್ಕೆ ಬರುತ್ತಿದ್ದ ಕೃಷ್ಣ ಎಂಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ಈ ವ್ಯಕ್ತಿಯು ಮನೆಯವರ ಕುಟುಂಬ ಸದಸ್ಯರ ಸಂಪರ್ಕದಲ್ಲಿ ಇದ್ದರು. ಹೀಗಾಗಿ ಕೆ.ಎಸ್‌. ಈಶ್ವರಪ್ಪ ಅವರ ಕುಟುಂಬಕ್ಕೆ ಸೋಂಕಿನ ಭೀತಿ ಎದುರಾಗಿದೆ. ಹೀಗಾಗಿ ಈಶ್ವರಪ್ಪ ಕುಟುಂಬದವರು ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

ಕೊರೊನಾ ಸೋಂಕಿಗೆ ಬೆಂಗಳೂರಿನ ಪಿಎಸ್‌ಐ ಸಾವು: ಇದುವರೆಗೆ 6 ಪೊಲೀಸರು ಬಲಿ!

ಶಿವಮೊಗ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲಾಕೋವಿಡ್‌ ಆಸ್ಪತ್ರೆಯಾಗಿರುವ ಮೆಗ್ಗಾನ್‌ಗೆ ಪೂರಕವಾಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯ ಅಗತ್ಯತೆಯನ್ನು ಜಿಲ್ಲಾಡಳಿತ ಈ ಮೂಲಕ ಪರಿಗಣಿಸಿದೆ. 100 ಬೆಡ್‌ಗಳ ಕೋವಿಡ್‌ ಕೇರ್‌ ಸೆಂಟರ್ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದೆ.

ಹಾಸಿಗೆ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಿಎಂಗೆ ಡಿಸಿಎಂ ಸಲಹೆ

ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮೌಖಿಕವಾಗಿ ಆದೇಶ ನೀಡಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ