ಆ್ಯಪ್ನಗರ

ಮೋದಿಯಿಂದ ದೇಶದ ಘನತೆ ಹೆಚ್ಚಳ: ಹಾಲಪ್ಪ

ಪ್ರಧಾನಿ ಮೋದಿ ಅವರ ನಾಯಕತ್ವ ಗುಣ ಭಾರತವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಕೇಂದ್ರದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.

Vijaya Karnataka 20 Apr 2019, 5:00 am
ಹೊಸನಗರ: ಪ್ರಧಾನಿ ಮೋದಿ ಅವರ ನಾಯಕತ್ವ ಗುಣ ಭಾರತವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಕೇಂದ್ರದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
Vijaya Karnataka Web SMR-19HOSP2


ಅವರು ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಬಿಜೆಪಿ ಮತಪ್ರಚಾರ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಸಮಾಜದ ಎಲ್ಲ ವರ್ಗಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ. ವಿಶೇಷವಾಗಿ ಜಿಲ್ಲೆಯಲ್ಲಿ ಈಡಿಗ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ ದ ಚಿಹ್ನೆಯೇ ಇಲ್ಲದಂತಹ ಪರಿಸ್ಥಿತಿ ಇಂದು ಬಂದಿದೆ. ರಾಷ್ಟ್ರೀಯ ಪಕ್ಷ ಎನಿಸಿರುವ ಕಾಂಗ್ರೆಸ್‌ ಕಾರ‍್ಯಕರ್ತರು ಇಂದು ಬೇರೆ ಪಕ್ಷ ದ ಪರವಾಗಿ ಮತ ಕೇಳುವಂತಾಗಿದೆ. ಆಂತರ‍್ಯದಲ್ಲಿ ಪ್ರತಿ ಪಕ್ಷ ಗಳು ಸೋಲೊಪ್ಪಿಕೊಂಡಾಗಿದೆ ಎಂದರು.

ಕುಟುಂಬ ರಾಜಕಾರಣವೇ ಸಾಧನೆ ಎಂದುಕೊಂಡಿರುವ ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ಈ ಬಾರಿ ಮತದಾರರು ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಈ ವೇಳೆ ಪಕ್ಷ ದ ಪ್ರಮುಖರಾದ ಎನ್‌.ಆರ್‌.ದೇವಾನಂದ, ಎ.ವಿ.ಮಲ್ಲಿಕಾರ್ಜುನ, ಶ್ರೀಧರ ಹಳಗುಂದ, ನೇರ್ಲೆ ಸ್ವಾಮಿ, ನಾಗರತ್ಮ ರಾವ್‌, ಮೋಹನ ಮಂಡಾನಿ ಮತ್ತಿತರರು ಇದ್ದರು. ಇದಕ್ಕೂ ಮುನ್ನ ಕಾರಕ್ಕಿ, ರಿಪ್ಪನ್‌ಪೇಟೆಗಳಲ್ಲಿ ಮತಪ್ರಚಾರ ಸಭೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ