ಆ್ಯಪ್ನಗರ

ವಿದ್ಯುನ್ಮಾನ ತಂತ್ರಜ್ಞಾನ ಬಳಕೆಯಿಂದ ದೇಶದ ಪ್ರಗತಿ

ಇಂದಿನ ದಿನಮಾನಗಳಲ್ಲಿ ವಿದ್ಯುತ್‌ ಉಪಕರಣಗಳು ಮನುಷ್ಯನ ಜೀವನದ ಒಂದು ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸುತ್ತಿವೆ. ಇವುಗಳ ಸರಿಯಾದ ಬಳಕೆಯಿಂದ ದೇಶದ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜೋಗನ್‌ ಶಂಕರ್‌ ಹೇಳಿದರು.

Vijaya Karnataka 12 Mar 2019, 5:00 am
ಶಿವಮೊಗ್ಗ: ಇಂದಿನ ದಿನಮಾನಗಳಲ್ಲಿ ವಿದ್ಯುತ್‌ ಉಪಕರಣಗಳು ಮನುಷ್ಯನ ಜೀವನದ ಒಂದು ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸುತ್ತಿವೆ. ಇವುಗಳ ಸರಿಯಾದ ಬಳಕೆಯಿಂದ ದೇಶದ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜೋಗನ್‌ ಶಂಕರ್‌ ಹೇಳಿದರು.
Vijaya Karnataka Web countrys progress through electronic technology use
ವಿದ್ಯುನ್ಮಾನ ತಂತ್ರಜ್ಞಾನ ಬಳಕೆಯಿಂದ ದೇಶದ ಪ್ರಗತಿ


ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ವಿಭಾಗ ಇತ್ತೀಚೆಗೆ ಏರ್ಪಡಿಸಿದ್ದ ಪ್ರಚಲಿತ ವಿದ್ಯುನ್ಮಾನ ಉಪಕರಣಗಳ ಕುರಿತ ಕಾರಾರ‍ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇಸ್ರೇಲ್‌ನಂತಹ ಸಣ್ಣ ದೇಶದಲ್ಲಿ ಮುನ್ನೂರು ಎಕರೆಯಷ್ಟು ಜಾಗ ವಿದ್ಯುತ್‌ ಉಪಕರಣಗಳ ಸಹಾಯದಿಂದ ಉಳುಮೆ ಮಾಡಲು ಸಾಧ್ಯವಿರುವಾಗ ನಮ್ಮ ದೇಶದಲ್ಲಿ ಅಂತಹ ತಂತ್ರಜ್ಞಾನ ಲಭ್ಯವಿಲ್ಲದಿರುವುದು ವಿಪರಾರ‍ಯಸ. ಈ ನಿಟ್ಟಿನಲ್ಲಿ ಶಿಕ್ಷ ಕರು ಮತ್ತು ವಿದ್ಯಾರ್ಥಿಗಳು ಆಲೋಚಿಸಿ ಹೆಚ್ಚಿನ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದರು.

ಸಾರಿಗೆ, ಕೃಷಿ ಹಾಗೂ ಕಾರ್ಖಾನೆ ಇನ್ನುಳಿದ ಕ್ಷೇತ್ರಗಳಲ್ಲಿ ವಿದ್ಯುತ್‌ ಉಪಕರಣಗಳ ಬಳಕೆಯಿಂದ ಪೆಟ್ರೋಲ್‌ ಹಾಗೂ ಡೀಸೆಲ್‌ ಬಳಕೆ ಕಡಿಮೆಯಾಗುವುದರಿಂದ ಮಾಲಿನ್ಯದ ಪ್ರಮಾಣ ತಗ್ಗಿ ಜಾಗತಿಕ ತಾಪಮಾನ ಹಾಗೂ ಪರಿಸರ ಮಾಲಿನ್ಯದಂತಹ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ವಿದ್ಯುನ್ಮಾನ ತಂತ್ರಜ್ಞಾನದಲ್ಲಿ ಸೋಲಾರ್‌ ಬಳಕೆಗೆ ಹೆಚ್ಚಿನ ಗಮನ ಹರಿಸಿದರೆ ವಿದ್ಯುತ್‌ಗಾಗಿ ಬೇರೆ ಮೂಲಗಳನ್ನು ಆಶ್ರಯಿಸುವ ಅಗತ್ಯವಿಲ್ಲ. ಇದರಿಂದ ವಿದ್ಯುನ್ಮಾನ ಉಪಕರಣಗಳ ಬಳಕೆಯಲ್ಲಿ ಕ್ರಾಂತಿ ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿರೇಖಾ ಮಾತನಾಡಿ, ವಿದ್ಯುನ್ಮಾನ ಉಪಕರಣಗಳ ಕುರಿತು ಇನ್ನೂ ಹೆಚ್ಚಿನ ಸಂಶೋಧನೆ ನಡೆಯಬೇಕು. ಈ ಸಲುವಾಗಿ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ವಿಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷ ಕರಿಗೆ ಸಹಕಾರ ನೀಡಲಾಗುವುದು. ಅಲ್ಲದೇ ಸರಕಾರದ ನೆರವು ಪಡೆಯಲು ಯತ್ನಿಸಲಾಗುವುದು ಎಂದರು.

ಈ ಸಂದರ್ಭ ಇಸ್ರೇಲ್‌ ಮಾದರಿಯ ವಿವಿಧ ಕೃಷಿ ಉಪಕರಣಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ