ಆ್ಯಪ್ನಗರ

ಸಾಂಸ್ಕೃತಿಕ, ಕ್ರೀಡಾ ಸಾಧನೆ ವ್ಯಕ್ತಿತ್ವ ಅಳೆಯುವ ಮಾನದಂಡ

ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದ ಸಾಧನೆಗಳು ನಮ್ಮ ವ್ಯಕ್ತಿತ್ವ ಅಳೆಯುವ ಮಾನದಂಡಗಳಾಗಿವೆ ಎಂದು ಕುವೆಂಪು ವಿವಿ ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀಕಂಠ ಕೂಡಿಗೆ ಹೇಳಿದರು.

Vijaya Karnataka 23 Mar 2019, 5:00 am
ಸಾಗರ: ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದ ಸಾಧನೆಗಳು ನಮ್ಮ ವ್ಯಕ್ತಿತ್ವ ಅಳೆಯುವ ಮಾನದಂಡಗಳಾಗಿವೆ ಎಂದು ಕುವೆಂಪು ವಿವಿ ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀಕಂಠ ಕೂಡಿಗೆ ಹೇಳಿದರು.
Vijaya Karnataka Web SMR-22SGR4


ಇಲ್ಲಿನ ದೇವರಾಜ್‌ ಅರಸು ಕಲಾಕ್ಷೇತ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಲ್‌.ಬಿ. ಮತ್ತು ಎಸ್‌.ಬಿ.ಎಸ್‌. ಕಾಲೇಜಿನ ವಿದ್ಯಾರ್ಥಿ ವೇದಿಕೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಬುದ್ಧಿ ಮತ್ತು ದೇಹದ ಸಮತೋಲನೆಯನ್ನು ಯುವ ಸಮೂಹ ಕಾಪಾಡಿಕೊಳ್ಳಬೇಕು. ಸುತ್ತಲಿನ ತಪ್ಪು ತಿಳಿವಳಿಕೆಯಿಂದ ಹೊರಗೆ ಬರುವಲ್ಲಿ ಅಗತ್ಯ ಶಿಕ್ಷ ಣ ಜ್ಞಾನವನ್ನು ಯುವ ಸಮೂಹ ಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷ ತೆ ವಹಿಸಿದ್ದ ಪ್ರಾಚಾರ್ಯ ಡಾ. ಸಿ.ಕೆ.ಮೂಕಪ್ಪನಾಯ್ಕ ಮಾತನಾಡಿ, ಕಾಲೇಜಿನ ಸಮಗ್ರ ಅಭಿವೃದ್ಧಿ ಜತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕ್ರೀಡಾ ನಿರ್ದೇಶಕ ಬೆಟ್ಟಸ್ವಾಮಿ ಉಪಸ್ಥಿತರಿದ್ದರು. ಶ್ರೇಯಾ ಮತ್ತು ಶ್ರೀನಿಧಿ ಪ್ರಾರ್ಥಿಸಿ, ಎಂ.ಆರ್‌.ರಮ್ಯ ಸ್ವಾಗತಿಸಿದರು. ವೇದಿಕೆ ಸಂಚಾಲಕ ಕೆ.ರಾಜು ಪ್ರಾಸ್ತಾವಿಕ ಮಾತನಾಡಿ, ವರದಿ ವಾಚಿಸಿದರು. ಮೇಧಿನಿ ವಂದಿಸಿ, ಸುಮಂತ ಎಸ್‌. ಭಂಡಾರಿ ಮತ್ತು ಭೂಮಿಕಾ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ