ಆ್ಯಪ್ನಗರ

ನಾಳೆ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಜಾವಳ್ಳಿಯ ಶ್ರೀ ಅರಬಿಂದೋ ಪದವಿ ಪೂರ್ವ ಕಾಲೇಜಿನಲ್ಲಿನ.9ರಂದು ಜಿಲ್ಲಾಪಿಯು ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ.

Vijaya Karnataka 8 Nov 2019, 5:00 am
ಶಿವಮೊಗ್ಗ: ಜಾವಳ್ಳಿಯ ಶ್ರೀ ಅರಬಿಂದೋ ಪದವಿ ಪೂರ್ವ ಕಾಲೇಜಿನಲ್ಲಿನ.9ರಂದು ಜಿಲ್ಲಾಪಿಯು ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ.
Vijaya Karnataka Web cultural competetion tomorrow
ನಾಳೆ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆ


ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶ್ರೀ ಅರಬಿಂದೋ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿಈ ಸ್ಪರ್ಧೆ ನಡೆಯಲಿದೆ. ಅಂದು ಬೆಳಗ್ಗೆ 9.30ಕ್ಕೆ ಸ್ಪರ್ಧೆ ಆರಂಭಗೊಳ್ಳಲಿದ್ದು, ಸಂಜೆ 4.30ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದ ಜ್ಞಾನದೀಪ ಸಂಸ್ಥೆ ಕಾರ್ಯದರ್ಶಿ ವಿ.ದೇವೇಂದ್ರ ಗುರುವಾರ ಸುದ್ದಿಗೋಷ್ಠಿಯಲ್ಲಿತಿಳಿಸಿದರು.

ನ.9ರಂದು ಬೆಳಗ್ಗೆ 9.30ಕ್ಕೆ ಗುರುಗುಹ ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯ ಶೃಂಗೇರಿ ಎಚ್‌.ಎಸ್‌.ನಾಗರಾಜ್‌ ಸ್ಪರ್ಧೆಗೆ ಚಾಲನೆ ನೀಡಲಿದ್ದು, ಡಿಡಿಪಿಯು ಮಹಮ್ಮದ್‌ ಇಮ್ತಿಯಾಜ್‌, ಜ್ಞಾನದೀಪ ವಿದ್ಯಾಸಂಸ್ಥೆ ಅಧ್ಯಕ್ಷ ಟಿ.ಪ್ರಕಾಶ್‌ ಭಾಗಿಯಾಗುವರು. ಇದೇ ದಿನ ಸಂಜೆ ನಡೆಯುವ ಸಮಾರೋಪದಲ್ಲಿಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದರು.

ಪ್ರಾಂಶುಪಾಲ ಡಾ.ಕೆ.ನಾಗರಾಜ್‌ ಮಾತನಾಡಿ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಚರ್ಚಾಸ್ಪರ್ಧೆ, ಏಕಾಪಾತ್ರ ಅಭಿನಯ, ಜಾನಪದ ಗೀತೆ, ಭಕ್ತಿಗೀತೆ ಸೇರಿದಂತೆ ಪ್ರತ್ಯೇಕ 11 ಪ್ರಕಾರದ ಸ್ಪರ್ಧೆಗಳು ನಡೆಯಲಿವೆ ಎಂದರು.
ಗೋಷ್ಠಿಯಲ್ಲಿಪ್ರಮುಖರಾದ ಜೋಸೆಫ್‌, ಮಧು ಮತ್ತಿತರರು ಹಾಜರಿದ್ದರು.

----
ಚರ್ಚೆ ಮತ್ತು ಪ್ರಬಂಧ ಸ್ಪರ್ಧೆಗಳು ಸಾವಯವ ಬೇಸಾಯ, ಖಾಸಗಿ ಬ್ಯಾಂಕ್‌ಗಳು, ಕೈಗಾರಿಕೆ, ಕ್ರೀಡಾ ಸಾಧನೆ ಮತ್ತಿತರ ವಿಷಯಗಳ ಬಗ್ಗೆ ನಡೆಯಲಿದೆ. ಜಿಲ್ಲೆಯ ಸುಮಾರು 128 ಕಾಲೇಜುಗಳಿಂದ 1300ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಸುಮಾರು 65 ತೀರ್ಪುಗಾರರನ್ನು ಆಯೋಜನೆ ಮಾಡಲಾಗಿದೆ. ಇಲ್ಲಿಗೆದ್ದವರು ಬೆಂಗಳೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗುತ್ತಾರೆ.

-ಡಾ.ಕೆ.ನಾಗರಾಜ್‌, ಪ್ರಾಂಶುಪಾಲ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ