ಆ್ಯಪ್ನಗರ

ರಾಸಾಯನಿಕ ಮುಕ್ತ ಕೃಷಿಗೆ ಹೈನುಗಾರಿಕೆ ಪೂರಕ

ಕೃಷಿಗೆ ಪೂರಕವಾಗಿರುವ ಹೈನುಗಾರಿಕೆ ಕೈಗೊಳ್ಳಲು ರೈತರು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ತಾ.ಪಂ. ಸದಸ್ಯ ಬಿ.ಜಿ.ಚಂದ್ರಮೌಳಿ ಹೇಳಿದರು.

Vijaya Karnataka 27 Dec 2019, 5:00 am
ಹೊಸನಗರ: ಕೃಷಿಗೆ ಪೂರಕವಾಗಿರುವ ಹೈನುಗಾರಿಕೆ ಕೈಗೊಳ್ಳಲು ರೈತರು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ತಾ.ಪಂ. ಸದಸ್ಯ ಬಿ.ಜಿ.ಚಂದ್ರಮೌಳಿ ಹೇಳಿದರು.
Vijaya Karnataka Web 19311015423723HOSP1_46
ಹೊಸನಗರ ತಾಲೂಕು ಜೇನಿ ಗ್ರಾ.ಪಂ. ವ್ಯಾಪ್ತಿಯ ಹೊಳೆಗೋಡು ಗ್ರಾಮದಲ್ಲಿನಡೆದ ಉಚಿತ ಜಾನುವಾರು ಚಿಕಿತ್ಸಾ ಶಿಬಿರಕ್ಕೆ ತಾ.ಪಂ. ಸದಸ್ಯ ಬಿ.ಜಿ.ಚಂದ್ರಮೌಳಿ ಚಾಲನೆ ನೀಡಿದರು.


ತಾಲೂಕಿನ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಗೋಡು ಗ್ರಾಮದಲ್ಲಿಸೋಮವಾರ ಪಶುಪಾಲನಾ ಇಲಾಖೆ ಹಮ್ಮಿಕೊಂಡಿದ್ದ ಉಚಿತ ಜಾನುವಾರು ಚಿಕಿತ್ಸಾ ಶಿಬಿರಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಜಾನುವಾರು ಸಾಕಣೆ ಭಾರತೀಯ ಸಂಸ್ಕೃತಿಯ ಒಂದು ಭಾಗ. ಆದರೆ ಯುವಜನತೆ ಹೈನುಗಾರಿಕೆಯತ್ತ ಒಲವು ತೋರುತ್ತಿಲ್ಲ. ಜಾನುವಾರು ಸಾಕುವುದು ಕಷ್ಟ ಎನ್ನುವ ಮನೋಭಾವ ಹೊಂದಿದ್ದಾರೆ. ವ್ಯವಸ್ಥಿತವಾಗಿ ಹೈನುಗಾರಿಕೆ ನಡೆಸಿದಲ್ಲಿಲಾಭದಾಯಕ ಕಸುಬನ್ನಾಗಿ ಮಾಡಿಕೊಳ್ಳಬಹುದು. ರಾಸಾಯನಿಕ ಮುಕ್ತ ಕೃಷಿಗೆ ಹೈನುಗಾರಿಕೆ ಸಹಕಾರಿಯಾಗಿದೆ ಎಂದರು.

ಈ ಸಂದರ್ಭ 100ಕ್ಕೂ ಹೆಚ್ಚು ಜಾನುವಾರುಗಳ ತಪಾಸಣೆ, ಚಿಕಿತ್ಸೆ ನಡೆಯಿತು. ಆರೋಗ್ಯವಂತ ಜಾನುವಾರುಗಳ ಮಾಲೀಕರಿಗೆ ಬಹುಮಾನ ನೀಡಲಾಯಿತು. ಗ್ರಾಪಂ ಅಧ್ಯಕ್ಷೆ ಗೀತಾ ಮಹೇಶ್‌ ಅಧ್ಯಕ್ಷತೆ ವಹಿಸಿದ್ದರು. ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಮಚಂದ್ರ, ಸದಸ್ಯ ಹರೀಶ್‌ಗೌಡ, ಶಿವಪ್ಪ, ಗ್ರಾಮಸ್ಥರಾದ ಸುರೇಶ್‌, ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಸರೋಜಿನಿ ಡಾ.ಕೃಷ್ಣೇಗೌಡ, ಡಾ.ದಯಾನಂದ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ