ಆ್ಯಪ್ನಗರ

ಡಾಂಬರ್-ಸಿಲಿಂಡರ್ ತುಂಬಿದ್ದ ಟ್ಯಾಂಕರ್-ಲಾರಿ ನಡುವೆ ಡಿಕ್ಕಿ: 3 ಸಾವು

ಶಿವಮೊಗ್ಗದಿಂದ ಸಾಗರದ ಕಡೆಗೆ ಹೊರಟಿದ್ದ ಅಡುಗೆ ಅನಿಲ ಸಿಲಿಂಡರ್ ತುಂಬಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಡಾಂಬರ್ ತುಂಬಿದ ಹತ್ತು ಚಕ್ರದ ಲಾರಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

Vijaya Karnataka Web 23 Mar 2019, 9:20 am
ಶಿವಮೊಗ್ಗ: ಡಾಂಬರ್ ತುಂಬಿದ ಟ್ಯಾಂಕರ್ ಮತ್ತು ಸಿಲಿಂಡರ್ ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪ ಸಂಭವಿಸಿದೆ.
Vijaya Karnataka Web lorry


ಬೆಳಗಿನ ಜಾವ ಸುಮಾರು 4:30 ಕ್ಕೆ ನಡೆದಿರುವ ಘಟನೆ ಸಂಭವಿಸಿದೆ. ಲೋಕೇಶ್, ಸಚಿನ್ ಮತ್ತು ಮಲಕಪ್ಪ ಮೃತ ದುರ್ದೈವಿಗಳು. ಘಟನೆಯಲ್ಲಿ ಮತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗದಿಂದ ಸಾಗರದ ಕಡೆಗೆ ಹೊರಟಿದ್ದ ಅಡುಗೆ ಅನಿಲ ಸಿಲಿಂಡರ್ ತುಂಬಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಡಾಂಬರ್ ತುಂಬಿದ ಹತ್ತು ಚಕ್ರದ ಲಾರಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ