ಆ್ಯಪ್ನಗರ

ಸ್ಪರ್ಧೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ

ಸ್ಪರ್ಧೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಸ್ಪರ್ಧಾಳುಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌ ಹೇಳಿದರು.

Vijaya Karnataka 13 Jul 2019, 6:13 pm
ಭದ್ರಾವತಿ : ಸ್ಪರ್ಧೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಸ್ಪರ್ಧಾಳುಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌ ಹೇಳಿದರು.
Vijaya Karnataka Web SMR-12BDVT2


ಅವರು ಶುಕ್ರವಾರ ಕರ್ನಾಟಕ ಪವರ್‌ ಲಿಪ್ಟಿಂಗ್‌ ಅಸೋಸಿಯೇಷನ್‌ ಸಹಯೋಗದೊಂದಿಗೆ ಶಿವಮೊಗ್ಗ ಡಿಸ್ಟ್ರಿಕ್ಟ್ ಪವರ್‌ಲಿಫ್ಟಿಂಗ್‌ ಅಸೋಸಿಯೇಷನ್‌ ಹಾಗೂ ಲಯನ್ಸ್‌ ಕ್ಲಬ್‌ ಶುಗರ್‌ ಟೌನ್‌ನಿಂದ ನ್ಯೂಟೌನ್‌ ಲಯನ್ಸ್‌ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ ಹಾಗೂ ರಾಜ್ಯಮಟ್ಟದ ಹಿರಿಯ ಪುರುಷರ ಮತ್ತು ಮಹಿಳೆಯರ ಪವರ್‌ ಲಿಫ್ಟಿಂಗ್‌ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಲಯನ್ಸ್‌ ಕ್ಲಬ್‌ ಶುಗರ್‌ ಟೌನ್‌ ಗೌರವಾಧ್ಯಕ್ಷ ಡಾ. ನರೇಂದ್ರ ಭಟ್‌ ಮಾತನಾಡಿ, ಕ್ರೀಡಾಪಟುಗಳಲ್ಲಿ ಯಾವುದೇ ತಾರತಮ್ಯವಿರಬಾರದು. ತಮ್ಮಲ್ಲಿನ ಪ್ರತಿಭೆ ಸಮಾಜಕ್ಕೆ ಸೂಕ್ತ ರೀತಿಯಲ್ಲಿ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕೆಂದರು.

ದಂತ ವೈದ್ಯೆ ಡಾ.ಎಚ್‌.ವಿ. ಶಿಲ್ಪ ಮಾತನಾಡಿ, ಪವರ್‌ ಲಿಫ್ಟಿಂಗ್‌ ಕ್ರೀಡಾಪಟುಗಳು ಹೆಚ್ಚು ಜಾಗೃತಿ ವಹಿಸಬೇಕು. ಹಲವು ಮುನ್ನೆಚ್ಚರಿಕೆಗಳು ಅನಿವಾರ್ಯ. ಅಲ್ಲದೆ, ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಆರೋಗ್ಯ ಕಾಪಾಡಿಕೊಂಡಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಸಲಹೆ ನೀಡಿದರು.

ಕಾರ್ಯದರ್ಶಿ ಪ್ರಕಾಶ್‌ ಕಾರಂತ್‌ ಮಾತನಾಡಿದರು. ಕರ್ನಾಟಕ ಪವರ್‌ ಲಿಫ್ಟಿಂಗ್‌ ಅಸೋಸಿಯೇಷನ್‌ ಕಾರ್ಯದರ್ಶಿ ಸತೀಶ್‌ಕುಮಾರ್‌ ಕುದ್ರೋಳಿ, ಜಿಲ್ಲಾಧ್ಯಕ್ಷ ಭಾಸ್ಕರ್‌, ಗೌರವಾಧ್ಯಕ್ಷ ಪಿ.ವೆಂಕಟರಮಣ ಶೇಟ್‌, ಎಲ್‌.ದೇವರಾಜ್‌, ವಿಐಎಸ್‌ಎಲ್‌ ಭದ್ರತಾ ವಿಭಾಗದ ಅಧಿಕಾರಿ ಕರ್ನಲ್‌ ಶೇಖಾವತ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ