ಆ್ಯಪ್ನಗರ

ಗ್ರಾಮಾಭಿವೃದ್ಧಿಗೆ ಇಚ್ಛಾಶಕ್ತಿ ಪ್ರದರ್ಶಿಸಿ

ಗ್ರಾಮೀಣಾಭಿವೃದ್ಧಿ ಮತ್ತು ನರೇಗಾ ಯೋಜನೆಯಡಿ ಗ್ರಾಮ ಅಭಿವೃದ್ಧಿ ಪಡಿಸುವ ಇಚ್ಛಾಶಕ್ತಿ ಗ್ರಾಮಾಡಳಿತಕ್ಕೆ ಇದ್ದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Vijaya Karnataka 20 Jun 2019, 5:00 am
ರಿಪ್ಪನ್‌ಪೇಟೆ: ಗ್ರಾಮೀಣಾಭಿವೃದ್ಧಿ ಮತ್ತು ನರೇಗಾ ಯೋಜನೆಯಡಿ ಗ್ರಾಮ ಅಭಿವೃದ್ಧಿ ಪಡಿಸುವ ಇಚ್ಛಾಶಕ್ತಿ ಗ್ರಾಮಾಡಳಿತಕ್ಕೆ ಇದ್ದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
Vijaya Karnataka Web demand for gram panchayat
ಗ್ರಾಮಾಭಿವೃದ್ಧಿಗೆ ಇಚ್ಛಾಶಕ್ತಿ ಪ್ರದರ್ಶಿಸಿ


ಪಟ್ಟಣದ ಗ್ರಾ.ಪಂ. ಗೆ ಬುಧವಾರ ಭೇಟಿ ನೀಡಿದ ಅವರು ಪಂಚತಂತ್ರ ಮತ್ತು ಕಂದಾಯ ಪರಿಷ್ಕರಣೆ ಸೇರಿದಂತೆ ಸ್ವಚ್ಛತೆ ಕುರಿತು ಪಿಡಿಒ ಬಳಿ ಸಮಗ್ರವಾಗಿ ಚರ್ಚಿಸಿ, ಸ್ವಚ್ಛಭಾರತ್‌ ಮಿಷನ್‌ ಯೋಜನೆಯಡಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹಳ್ಳಿ ಪ್ರದೇಶದಲ್ಲಿ ಹಸಿಕಸವನ್ನು ಮನೆಯ ಹಿಂಭಾಗದ ತಿಪ್ಪೆಗೆ ಹಾಕುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಗ್ರಾಮಾಡಳಿತ ಮುಂದಾಗಬೇಕು ಮತ್ತು ಒಣ ಕಸವನ್ನು ಹೇಗೆ ಪುನರ್‌ ಬಳಕೆ ಮಾಡಿ, ಪಂಚಾಯಿತಿಗೆ ಸಂಪನ್ಮೂಲ ಬರುವಂತೆ ಮಾಡಲು ಕ್ರಮ ಕೈಗೊಳ್ಳಿ ಎಂದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಎಂಎಲ್‌ಸಿ ಪ್ರಸನ್ನಕುಮಾರ್‌, ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್‌.ಕುಮಾರ್‌, ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ