ಆ್ಯಪ್ನಗರ

‘ಹುಕ್ಕಾ ಕೇಂದ್ರ’ ರದ್ದತಿಗೆ ಆಗ್ರಹ

ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಾಪಿಸಲಾಗುತ್ತಿರುವ 'ಹುಕ್ಕಾ ಕೇಂದ್ರ'ವನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

Vijaya Karnataka 2 Jan 2019, 5:00 am
ಶಿವಮೊಗ್ಗ : ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಾಪಿಸಲಾಗುತ್ತಿರುವ 'ಹುಕ್ಕಾ ಕೇಂದ್ರ'ವನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
Vijaya Karnataka Web SMG-0101-2-15-1SMG5


ಗೋಪಾಲಗೌಡ ಬಡಾವಣೆ ನಿವಾಸಿಗಳ ಸಂಘ, ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿಗಳ ಸಂಘ, ಚಂದನ ಪಾರ್ಕ್‌ ಆರೋಗ್ಯ ಅಭಿವೃದ್ಧಿ ಸಮಿತಿ, ನಿರಂತರ ಟ್ರಸ್ಟ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.

ಹುಕ್ಕಾ ಕೇಂದ್ರ ತಲೆ ಎತ್ತಿದ್ದಲ್ಲಿ ಯುವಜನಾಂಗ ದಾರಿತಪ್ಪುವ ಸಾಧ್ಯತೆ ಇದೆ. ಜತೆಗೆ, ಇದೇ ಸ್ಥಳದಲ್ಲಿ ದೇವಸ್ಥಾನ, ಸರಕಾರಿ ಕಚೇರಿಗಳು, ಶಾಲಾ ಕಾಲೇಜು, ಬ್ಯಾಂಕ್‌, ಆಸ್ಪತ್ರೆಗಳಿವೆ. ಒಂದುವೇಳೆ, ಹುಕ್ಕಾ ಕೇಂದ್ರವಾದ್ದಲ್ಲಿ ಇಡೀ ವಾತಾವರಣವೇ ಹಾಳಾಗಲಿದೆ. ಈ ಕುರಿತು ಈಗಾಗಲೇ ಜಿಲ್ಲಾಡಳಿತ ಗಮನಕ್ಕೂ ತರಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರಮುಖರಾದ ಜಯಣ್ಣ ದೂರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ