ಆ್ಯಪ್ನಗರ

ಜ್ಞಾನೇಂದ್ರರಿಗೆ ಸಚಿವ ಸ್ಥಾನಕ್ಕೆ ಆಗ್ರಹ

ರಾಜ್ಯದಲ್ಲಿ ಅತಿ ದೊಡ್ಡ ವಿಧಾನಸಭಾ ಕ್ಷೇತ್ರವಾದ ತೀರ್ಥಹಳ್ಳಿ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಆರಗಜ್ಞಾನೇಂದ್ರ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇತ್ತೀಚೆಗೆ ತಹಸೀಲ್ದಾರ್‌ ಮೂಲಕ ತಾಲೂಕು ಮುಸ್ಲಿಂ ಸಂಯುಕ್ತ ಒಕ್ಕೂಟ ಮನವಿ ಸಲ್ಲಿಸಿತು.

Vijaya Karnataka 27 Aug 2019, 5:00 am
ರಾಜ್ಯದಲ್ಲಿ ಅತಿ ದೊಡ್ಡ ವಿಧಾನಸಭಾ ಕ್ಷೇತ್ರವಾದ ತೀರ್ಥಹಳ್ಳಿ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಆರಗಜ್ಞಾನೇಂದ್ರ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇತ್ತೀಚೆಗೆ ತಹಸೀಲ್ದಾರ್‌ ಮೂಲಕ ತಾಲೂಕು ಮುಸ್ಲಿಂ ಸಂಯುಕ್ತ ಒಕ್ಕೂಟ ಮನವಿ ಸಲ್ಲಿಸಿತು.
Vijaya Karnataka Web SMR-23TTH5


ಸುಮಾರು 4 ದಶಕಗಳಿಂದ ಹೋರಾಟ ಮೂಲಕ ಕ್ಷೇತ್ರದ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿರುವ ಆರಗಜ್ಞಾನೇಂದ್ರ ಅವರು ಹಿರಿಯ ಶಾಸಕರಾಗಿದ್ದಾರೆ. ಕೇಂದ್ರ, ರಾಜ್ಯ ಸರಕಾರದಿಂದ ಅನೇಕ ಅನುದಾನ ಮಂಜೂರು ಮಾಡಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೊದಲ ಪಟ್ಟಿಯಲ್ಲಿ ಆರಗಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಕಲ್ಪಿಸದಿರುವುದು ಬೇಸರದ ವಿಷಯವಾಗಿದೆ ಎಂದು ಒಕ್ಕೂಟ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ