ಆ್ಯಪ್ನಗರ

ಮನೆ ನಿರ್ಮಾಣ ಕಾಮಗಾರಿ ಗಮನಹರಿಸಲು ಆಗ್ರಹ

ಗುಣಮಟ್ಟದ ಮನೆಗಳನ್ನು ನಿರ್ಮಿಸಿಕೊಡುವಂತೆ ಒತ್ತಾಯಿಸಿ ವಾರ್ಡ್‌ ಸಂಖ್ಯೆ ಮೂರರ ಶಾಂತಿನಗರ ನಿವಾಸಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

Vijaya Karnataka 29 Jun 2019, 5:00 am
ಶಿವಮೊಗ್ಗ : ಗುಣಮಟ್ಟದ ಮನೆಗಳನ್ನು ನಿರ್ಮಿಸಿಕೊಡುವಂತೆ ಒತ್ತಾಯಿಸಿ ವಾರ್ಡ್‌ ಸಂಖ್ಯೆ ಮೂರರ ಶಾಂತಿನಗರ ನಿವಾಸಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web SMG-2806-2-15-28SMG6


ಕೊಳಚೆ ನಿರ್ಮೂಲನ ಮಂಡಳಿಯಿಂದ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಕಳಪೆಯಿಂದ ಕೂಡಿದೆ. ಈಗಾಗಲೇ ಹಲವು ಮನೆಗಳು ನಿರ್ಮಾಣವಾಗಿವೆ. ಆದರೆ, ಮನೆಗಳೆಲ್ಲ ಕಳಪೆಯಿಂದ ಕೂಡಿವೆ.ಮನೆ ಕಟ್ಟಲು ಮರಳನ್ನು ಬಳಸದೇ ಕೆಳಮಟ್ಟದ ಜಲ್ಲಿಪುಡಿ ಬಳಸಲಾಗುತ್ತಿದೆ ಎಂದು ಡಿಸಿ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕಬ್ಬಿಣ ಮತ್ತು ಸಿಮೆಂಟ್‌ ಸರಿಯಾದ ಪ್ರಮಾಣದಲ್ಲಿ ಬಳಸುತ್ತಿಲ್ಲ. ಈ ಬಗ್ಗೆ ಗುತ್ತಿಗೆದಾರರು ಹಾಗೂ ಸ್ಲಂ ಬೋರ್ಡ್‌ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂದು ಆಗ್ರಹಿಸಿದ್ದಾರೆ.

ಧೀರರಾಜ್‌ ಹೊನ್ನವಿಲೆ, ರುದ್ರಪ್ಪ, ಗೌರಮ್ಮ, ಸರೋಜಮ್ಮ, ಶಕುಂತಲಾ, ಪ್ರಕಾಶ್‌, ಮುನೀರ್‌ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ