ಆ್ಯಪ್ನಗರ

ಜಾತ್ರೆ ನಿಮಿತ್ತ ರಸ್ತೆಗಳ ಅಭಿವೃದ್ಧಿ

ಇತಿಹಾಸ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರೆಯು 2020ರ ಫೆಬ್ರವರಿಯಲ್ಲಿನಡೆಯುವುದರಿಂದ ನಗರ ವ್ಯಾಪ್ತಿಯ ಪ್ರಮುಖ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಯೋಜನೆ ರೂಪಿಸಲಾಗಿದೆ ಎಂದು ಶಾಸಕ ಎಚ್‌.ಹಾಲಪ್ಪ ಹೇಳಿದರು.

Vijaya Karnataka 17 Sep 2019, 5:00 am
ಸಾಗರ: ಇತಿಹಾಸ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರೆಯು 2020ರ ಫೆಬ್ರವರಿಯಲ್ಲಿನಡೆಯುವುದರಿಂದ ನಗರ ವ್ಯಾಪ್ತಿಯ ಪ್ರಮುಖ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಯೋಜನೆ ರೂಪಿಸಲಾಗಿದೆ ಎಂದು ಶಾಸಕ ಎಚ್‌.ಹಾಲಪ್ಪ ಹೇಳಿದರು.
Vijaya Karnataka Web 16SGR14_46


ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಕಾಮಗಾರಿಯನ್ನು ಸೋಮವಾರ ವೀಕ್ಷಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರವ್ಯಾಪ್ತಿಯಲ್ಲಿರಸ್ತೆ, ಚರಂಡಿ ಹಾಳಾಗಿದ್ದು, ಮುಖ್ಯಮಂತ್ರಿಗಳ ಬಳಿ ತಾತ್ಕಾಲಿಕವಾಗಿ 5 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಸೊರಬ ರಸ್ತೆ ವಿಸ್ತರಣೆಗೂ ಸದ್ಯದಲ್ಲಿಯೆ ಗಮನ ಹರಿಸಲಾಗುತ್ತದೆ. ಸೊರಬ ರಸ್ತೆಯ ರೈಲ್ವೆ ಗೇಟ್‌ನಿಂದ 2 ಕಿ.ಮೀ. ದೂರದವರೆಗೆ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ನಗರ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 10 ಕೋಟಿ, 25 ಕೋಟಿ ರೂ. ಇದೆ ಎಂದು ಹೇಳುತ್ತಿರುವುದು ಸುಳ್ಳು. ಹಣ ಬಿಡುಗಡೆ ಸಂಬಂಧ ಹಿಂದಿನ ಸರಕಾರ ಒಪ್ಪಿಗೆ ನೀಡಿದೆ. ಆದರೆ, ಯಾವುದೆ ಹಣ ಬಿಡುಗಡೆಯಾಗಿಲ್ಲ. ಕಾಗೋಡು ತಿಮ್ಮಪ್ಪನವರು ಹೊಸನಗರ ತಾಲೂಕಿನ ಸುತ್ತ ಸೇತುವೆಗೆ 10 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ಹಣ ಬಿಡುಗಡೆಯಾಗಿಲ್ಲ. ಸೇತುವೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ ಮಾತ್ರ ಸಿಕ್ಕಿದೆ ಎಂದರು.

ತಾ.ಪಂ. ಸದಸ್ಯ ದೇವೇಂದ್ರಪ್ಪ, ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ