ಆ್ಯಪ್ನಗರ

ಶುಚಿತ್ವದಿಂದ ಅತಿಸಾರ ತಡೆ ಸಾಧ್ಯ

ಅತಿಸಾರ ಭೇದಿಗೆ ಶುಚಿತ್ವದ ಕೊರತೆಯೆ ಕಾರಣ. ಶುಚಿತ್ವ ಬೆಳೆಸಿಕೊಳ್ಳುವ ಮೂಲಕ ಇಂತಹ ಮಾರಕ ರೋಗಗಳಿಂದ ತಮ್ಮನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಶೀಕ್ಷ ಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್‌ ಸಲಹೆ ನೀಡಿದರು.

Vijaya Karnataka 8 Jun 2019, 5:00 am
ಶಿವಮೊಗ್ಗ: ಅತಿಸಾರ ಭೇದಿಗೆ ಶುಚಿತ್ವದ ಕೊರತೆಯೆ ಕಾರಣ. ಶುಚಿತ್ವ ಬೆಳೆಸಿಕೊಳ್ಳುವ ಮೂಲಕ ಇಂತಹ ಮಾರಕ ರೋಗಗಳಿಂದ ತಮ್ಮನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಶೀಕ್ಷ ಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್‌ ಸಲಹೆ ನೀಡಿದರು.
Vijaya Karnataka Web kanteah [ bjp-holaluru]


ಬಾಪೂಜಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇತ್ತೀಚೆಗೆ ಆಯೋಜಿಸಿದ್ದ ಅತಿಸಾರ ಭೇದಿ ನಿಯಂತ್ರಣಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಪಂಚಾದ್ಯಂತ ಪ್ರತಿದಿನ ಸಾವಿರಕ್ಕೂ ಹೆಚ್ಚು ಮಕ್ಕಳು ಅತಿಸಾರದಿಂದ ಸಾವಿಗೀಡಾಗುತ್ತಿದ್ದಾರೆ. ಅದನ್ನು ತಡೆಗಟ್ಟುವ ಕ್ರಮಗಳನ್ನು ಜನತೆ ಅರಿಯಬೇಕಿದೆ ಎಂದರು.

ಅತಿಸಾರಕ್ಕೆ ಒಳಗಾದವರು ನಿರ್ಜಲೀಕರಣಗೊಂಡು ನಿತ್ರಾಣರಾಗುತ್ತಾರೆ. ಈ ಕಾರಣದಿಂದ ಅವರಿಗೆ ಸರಿಯಾದ ನೀರು, ಒಆರ್‌ಎಸ್‌ ದ್ರಾವಣ ನೀಡುತ್ತಿರಬೇಕು. ಒಂದು ಬಾರಿ ತಯಾರಿಸಿದ ಒಆರ್‌ಎಸ್‌ ದ್ರಾವಣ 24 ಗಂಟೆ ಕಾಲ ಮಾತ್ರ ಬಳಕೆಗೆ ಯೋಗ್ಯವಾಗಿರುತ್ತದೆ. ಏನನ್ನೇ ತಿನ್ನುವ ಹಾಗೂ ಮಕ್ಕಳಿಗೆ ತಿನ್ನಿಸುವ ಮೊದಲು ಕೈ ತೊಳೆಯಬೇಕು. ಬಾಟಲಿ ಹಾಲು ನೀಡದೆ ಎದೆಹಾಲನ್ನು ಎರಡು ವರ್ಷದವರೆಗೂ ಉಣಿಸಬೇಕು. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕೆಂದರು.

ಇಂತಹ ಮುನ್ನೆಚ್ಚರಿಕೆಗಳ ಜತೆಗೆ ಸೂಕ್ತ ಚಿಕಿತ್ಸೆಯೂ ಅಗತ್ಯ. ರೋಗಕ್ಕೆ ತುತ್ತಾದ ಮಕ್ಕಳು ಅಥವಾ ರೋಗಿಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು. ಒ ಆರ್‌ಎಸ್‌ ಹಾಗೂ ಜಿಂಕ್‌ ಮಾತ್ರೆಗಳ ಬಳಕೆಯ ಪ್ರಾತ್ಯಕ್ಷಿಕೆ ತೋರಿಸಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಶಿವರಾಮೇಗೌಡ ಮಾತನಾಡಿದರು. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್‌ ಸುರಗಿಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ, ಸ್ಥಳೀಯ ಆರೋಗ್ಯಾಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ