ಆ್ಯಪ್ನಗರ

ಕೆಎಫ್‌ಡಿ ಬಾಧಿತರ ನೆರವಿಗೆ ಜಿಲ್ಲಾಡಳಿತ

ತಾಲೂಕಿನ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಂಕಿತ ಕೆಎಫ್‌ಡಿಗೆ ತುತ್ತಾಗಿ ಮಣಿಪಾಲದ ಕೆಂಎಂಸಿ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದವರ ನೆರವಿಗೆ ಜಿಲ್ಲಾಡಳಿತ ಮುಂದಾಗಿದೆ.

Vijaya Karnataka 2 Feb 2019, 5:00 am
ಸಾಗರ: ತಾಲೂಕಿನ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಂಕಿತ ಕೆಎಫ್‌ಡಿಗೆ ತುತ್ತಾಗಿ ಮಣಿಪಾಲದ ಕೆಂಎಂಸಿ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದವರ ನೆರವಿಗೆ ಜಿಲ್ಲಾಡಳಿತ ಮುಂದಾಗಿದೆ. ಈ ಪ್ರಕರಣಗಳಲ್ಲಿ ಆಸ್ಪತ್ರೆ ಬಿಲ್‌ಗಳನ್ನು ಆಧರಿಸಿ ಶುಲ್ಕ ಪಾವತಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಅರಳಗೋಡು ಗ್ರಾಮ ಪಂಚಾಯಿಗೆ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ.
Vijaya Karnataka Web district administration help to kfd sufferers
ಕೆಎಫ್‌ಡಿ ಬಾಧಿತರ ನೆರವಿಗೆ ಜಿಲ್ಲಾಡಳಿತ


ಈ ನಡುವೆ ಅರಳಗೋಡಿನಿಂದ ಇಬ್ಬರು ಜ್ವರ ಪೀಡಿತರನ್ನು ಮಣಿಪಾಲಕ್ಕೆ ಕಳುಹಿಸಿಕೊಡಲಾಗಿದೆ. ಶುಕ್ರವಾರ ಮೂರು ಮಂಗಗಳು ಸಾವನ್ನಪ್ಪಿದ ಘಟನೆಗಳು ನಡೆದಿವೆ. ಚಿಪ್ಳಿ ಲಿಂಗದಹಳ್ಳಿಯಲ್ಲಿ ಮೃತ ಮಂಗದ ಶವಪರೀಕ್ಷೆಯನ್ನು ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಎನ್‌.ಎಚ್‌.ಶ್ರೀಪಾದರಾವ್‌ ನೇತೃತ್ವದಲ್ಲಿ ನಡೆಸಲಾಗಿದೆ. ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿಯಲ್ಲಿ ಮತ್ತೊಂದು ಮಂಗ ಸಾವನ್ನಪ್ಪಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ