ಆ್ಯಪ್ನಗರ

ನೆರೆ ಸಂತ್ರಸ್ತರಿಗೆ ಜಿಲ್ಲಾ ಕಾಂಗ್ರೆಸ್‌ ನೆರವು

ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಗೆ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಬುಧವಾರ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅಗತ್ಯ ವಸ್ತುಗಳ ಕಿಟ್‌ ನೀಡಲಾಯಿತು.

Vijaya Karnataka 15 Aug 2019, 5:00 am
ಶಿವಮೊಗ್ಗ : ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಗೆ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಬುಧವಾರ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅಗತ್ಯ ವಸ್ತುಗಳ ಕಿಟ್‌ ನೀಡಲಾಯಿತು.
Vijaya Karnataka Web SMR-14GANESH3


ನಗರದ ರಾಮಣ್ಣಶ್ರೇಷ್ಠಿ ಪಾರ್ಕ್‌ನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ 15 ಕೆ.ಜಿ. ಅಕ್ಕಿ, 5 ಕೆ.ಜಿ.ಗೋಧಿ, ಉಪ್ಪು, ದವಸ ಧಾನ್ಯಗಳು, ಮಸಾಲೆ ಸಾಮಾಗ್ರಿಗಳು, ದಿನ ಸಾಮಾಗ್ರಿಗಳೊಳಗೊಂಡ ಕಿಟ್‌ನ್ನು ನೆರೆ ಸಂತ್ರಸ್ತರಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಚ್‌.ಎಸ್‌.ಸುಂದರೇಶ್‌ ಮಾತನಾಡಿ, ಕಳೆದ ವಾರ ಸುರಿದ ಭಾರೀ ಮಳೆಗೆ ನಗರದಲ್ಲಿ ಹಲವು ಜನರು ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈಗ ಮತ್ತೆ ಅವರು ಹೊಸದಾಗಿ ಬದುಕು ಶುರು ಮಾಡಬೇಕಿದೆ. ಹೀಗಾಗಿ ಸರಕಾರ ಘೋಷಣೆ ಮಾಡಿರುವ 5 ಲಕ್ಷ ರೂ.ಪರಿಹಾರವನ್ನು 10 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆಯೂ ನೆರೆಯಿಂದ ಹಾನಿಗೊಳದಾದ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಸಂತ್ರಸ್ತರ ಪರ ನಿಂತು ಸಾಕಷ್ಟು ಪರಹಾರ ನೀಡಿದೆ. ಈಗ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿಲ್ಲದಿದ್ದರೂ ನಾವು ಸಂತ್ರಸ್ತರ ಪರವಾಗಿ ನಿಂತು ಕೆಲಸ ಮಾಡುತ್ತೇವೆ. ಸರಕಾರದಿಂದ ಬರಬೇಕಾದ ಪರಿಹಾರವನ್ನು ಸಂತ್ರಸ್ತರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ವಿಧಾನ ಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್‌, ಎಚ್‌ಎಂ ಚಂದ್ರಶೇಖರಪ್ಪ ,ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್‌, ಪಾಲಿಕೆ ಸದಸ್ಯ ಎಚ್‌.ಸಿ.ಯೋಗೀಶ್‌, ಹಿರಿಯ ಮುಖಂಡ ಎಸ್‌.ಪಿ.ಶೇಷಾದ್ರಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾದ ನಾಗರಾಜ್‌ ಹಾಗೂ ಕಾಶಿ ವಿಶ್ವನಾಥ್‌, ಯುವ ಕಾಂಗ್ರೆಸ್‌ನ ಜಿಲ್ಲಾ ಕಾರ್ಯಾಧ್ಯಕ್ಷ ಮಧುಸೂದನ್‌ , ರಾಜ್ಯ ಉಪಾಧ್ಯಕ್ಷ ಚೇತನ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ