ಆ್ಯಪ್ನಗರ

ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಬೇಡ: ಡಾ.ಆಳ್ವಾ

ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಬೇಡ, ಪಬ್ಲಿಕ್‌ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿದಾಗ ಉತ್ತಮ ಅಂಕ ಗಳಿಸಲು ಸಾಧ್ಯವಾಗುವುದು ಎಂದು ಮೂಡುಬಿದರೆ ಅಳ್ವಾಸ್‌ ಶಿಕ್ಷ ಣ ಸಂಸ್ಥೆ ಅಧ್ಯಕ್ಷ ಡಾ.ಮೋಹನ್‌ ಆಳ್ವಾ ಹೇಳಿದರು.

Vijaya Karnataka 26 Jan 2019, 5:00 am
ರಿಪ್ಪನ್‌ಪೇಟೆ: ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಬೇಡ, ಪಬ್ಲಿಕ್‌ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿದಾಗ ಉತ್ತಮ ಅಂಕ ಗಳಿಸಲು ಸಾಧ್ಯವಾಗುವುದು ಎಂದು ಮೂಡುಬಿದರೆ ಅಳ್ವಾಸ್‌ ಶಿಕ್ಷ ಣ ಸಂಸ್ಥೆ ಅಧ್ಯಕ್ಷ ಡಾ.ಮೋಹನ್‌ ಆಳ್ವಾ ಹೇಳಿದರು.
Vijaya Karnataka Web SMR-25rpt2


ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪರೀಕ್ಷೆಯನ್ನು ಏಕಾಗ್ರತೆ ಮತ್ತು ಅತ್ಮವಿಶ್ವಾಸದಿಂದ ಬರೆಯಬೇಕು. ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಆಸಕ್ತಿಯಿಂದ ಗಮನಿಸಿದರೆ ಅತ್ಯಂತ ಸರಳವಾಗಿ ಅರಿಯಬಹುದು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಅತಿಮುಖ್ಯ ಘಟ್ಟವಾಗಿದ್ದು ಬಹಳ ಶ್ರಮಪಟ್ಟು ವಿದ್ಯಾಭ್ಯಾಸ ಮಾಡಿ ತಮ್ಮ ಬದುಕನ್ನು ರೂಪಿಸಿಕೊಳ್ಳುವಂತೆ ತಿಳಿ ಹೇಳಿದರು.

ಆಳ್ವಾಸ್‌ ನುಡಿಸಿರಿ ಘಟಕದ ಅಧ್ಯಕ್ಷ ಎನ್‌.ಸತೀಶ್‌ ಅಧ್ಯಕ್ಷತೆ ವಹಿಸಿದ್ದರು. ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯ ಪ್ರೊ.ನಳಿನ್‌ಚಂದ್ರ, ಸರಕಾರಿ ಪ್ರೌಢಶಾಲೆ ಉಪಪ್ರಾಚಾರ್ಯೆ ನವೀದಾಬೇಗಂ, ಎನ್‌ಎಸ್‌ಎಸ್‌ ಅಧಿಕಾರಿ ಚಂದ್ರಶೇಖರ್‌, ಮುಖ್ಯಶಿಕ್ಷಕ ಆರ್‌.ಉಮೇಶ್‌ ಮತ್ತಿತರರು ಹಾಜರಿದ್ದರು.

ಎಚ್‌.ಎ.ರಾಧಾಕೃಷ್ಣ ಸ್ವಾಗತಿಸಿ, ಹಾಲಪ್ಪ ಸಂಕೂರ್‌ ನಿರೂಪಿಸಿ, ಸಂತೋಷ ವಂದಿಸಿದರು. ಸುತ್ತಮುತ್ತಲಿನ 10ಹೆಚ್ಚು ಶಾಲೆ ಕಾಲೇಜು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ