ಆ್ಯಪ್ನಗರ

ಸಿಟಿಯೊಳಗೆ ಬಸ್‌ ಓಡಿಸದಿದ್ರೆ ಅಹೋರಾತ್ರಿ ಧರಣಿ

ಕೇಂದ್ರ ಸರಕಾರದ ನಗರಾಭಿವೃದ್ಧಿ ಇಲಾಖೆಯಿಂದ ಜನ್‌ನರ್ಮ್‌ ಯೋಜನೆ ಅಡಿ ಮಂಜೂರಾಗಿರುವ 40 ಬಸ್‌ಗಳನ್ನು ವಾರ್ಡ್‌ ವ್ಯಾಪ್ತಿಯಲ್ಲಿ 15 ದಿನದೊಳಗೆ ಓಡಿಸದಿದ್ದರೆ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡುವುದಾಗಿ ಅಣ್ಣಾ ಹಜಾರೆ ಹೋರಾಟ ಸಮಿತಿ ಎಚ್ಚರಿಸಿದೆ.

Vijaya Karnataka 7 Jun 2019, 5:00 am
ಶಿವಮೊಗ್ಗ: ಕೇಂದ್ರ ಸರಕಾರದ ನಗರಾಭಿವೃದ್ಧಿ ಇಲಾಖೆಯಿಂದ ಜನ್‌ನರ್ಮ್‌ ಯೋಜನೆ ಅಡಿ ಮಂಜೂರಾಗಿರುವ 40 ಬಸ್‌ಗಳನ್ನು ವಾರ್ಡ್‌ ವ್ಯಾಪ್ತಿಯಲ್ಲಿ 15 ದಿನದೊಳಗೆ ಓಡಿಸದಿದ್ದರೆ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡುವುದಾಗಿ ಅಣ್ಣಾ ಹಜಾರೆ ಹೋರಾಟ ಸಮಿತಿ ಎಚ್ಚರಿಸಿದೆ.
Vijaya Karnataka Web SMR-6GANESH2


ಜನ್‌ನರ್ಮ್‌ ಯೋಜನೆ ಅಡಿ 2013ರಲ್ಲಿ ಮಂಜೂರಾದ ನೂರು ನಗರ ಸಾರಿಗೆ ಸಂಸ್ಥೆ ಬಸ್‌ಗಳ ಪೈಕಿ 40 ನೀಡಲಾಗಿದೆ. ಆದರೆ, ಅವುಗಳನ್ನು ನಗರದಲ್ಲಿ ಓಡಿಸದೇ ಶಿವಮೊಗ್ಗ ಮತ್ತು ಭದ್ರಾವತಿ ಮಧ್ಯೆ ಸಂಚರಿಸಲು ಬಿಡಲಾಗಿದೆ ಎಂದು ಸಮಿತಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಬಸ್‌ಗಳು ನಗರದ ಎಲ್ಲ ವಾರ್ಡ್‌ಗಳಲ್ಲಿ ಸಂಚರಿಸುವುದಕ್ಕಾಗಿ ನೀಡಲಾಗಿದೆ. ಆದರೆ, ನಗರಾಭಿವೃದ್ಧಿ ಆದೇಶವನ್ನು ಉಲ್ಲಂಘಿಸಿ, ಬಹುತೇಕ ಬಸ್‌ಗಳು ನಗರದ ಹೊರವಲಯದಲ್ಲಿ ಸಂಚರಿಸುತ್ತಿದ್ದು, ನಗರ ವ್ಯಾಪ್ತಿಯಲ್ಲಿ ಇದರ ಸೇವೆ ಜನರಿಗೆ ಲಭ್ಯವಾಗುವಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ವಿಭಾಗೀಯ ನಿಯಂತ್ರಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಕೋರಲಾಗಿದೆ. ಸಮಿತಿಯ ಗೌರವ ಅಧ್ಯಕ್ಷ ಡಾ.ಎನ್‌.ಎಲ್‌.ನಾಯಕ್‌, ಅಧ್ಯಕ್ಷ ಡಾ.ಚಿಕ್ಕಸ್ವಾಮಿ, ಟಿ.ಎಂ.ಅಶೋಕ್‌ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ