ಆ್ಯಪ್ನಗರ

ದುಶ್ಚಟಕ್ಕೆ ಭವಿಷ್ಯ ಬಲಿಕೊಡಬೇಡಿ

ತಂಬಾಕು ಸೇವನೆ ಹಾಗೂ ಧೂಮಪಾನದಿಂದ ನಿತ್ಯ ಭಾರತದಲ್ಲಿ 2ಸಾವಿರಕ್ಕೂ ಹೆಚ್ಚುಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ರಾಜಸ್ಥಾನ ಕೋಟದ ದಾಸ್ವಾನಿ ಡೆಂಟಲ್‌ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಸಚಿನ್‌ ಸಿಹ್ನ ಆತಂಕ ವ್ಯಕ್ತಪಡಿಸಿದರು.

Vijaya Karnataka 10 Mar 2019, 5:00 am
ಶಿವಮೊಗ್ಗ: ತಂಬಾಕು ಸೇವನೆ ಹಾಗೂ ಧೂಮಪಾನದಿಂದ ನಿತ್ಯ ಭಾರತದಲ್ಲಿ 2ಸಾವಿರಕ್ಕೂ ಹೆಚ್ಚುಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ರಾಜಸ್ಥಾನ ಕೋಟದ ದಾಸ್ವಾನಿ ಡೆಂಟಲ್‌ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಸಚಿನ್‌ ಸಿಹ್ನ ಆತಂಕ ವ್ಯಕ್ತಪಡಿಸಿದರು.
Vijaya Karnataka Web SMR-9ganesh5

ಸುಬ್ಬಯ್ಯ ದಂತವೈದ್ಯಕೀಯ ಮಹಾವಿದ್ಯಾಲಯದಿಂದ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ದಂತ ವೈದ್ಯರ ದಿನಾಚರಣೆ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ರಾಜ್ಯಮಟ್ಟದ ನಿರಂತರ ದಂತ ಸಂರಕ್ಷ ಣಾ ಶಿಕ್ಷ ಣ ಕಾರ‍್ಯಕ್ರಮದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಸ್ವಸ್ಥತೆ ಹಾಗೂ ನಿಯಂತ್ರಣ ಕುರಿತು ಅವರು ಉಪನ್ಯಾಸ ನೀಡಿದರು.

ಅತಿಯಾದ ತಂಬಾಕು ಸೇವನೆ, ಧೂಮಪಾನದಿಂದ ಮನುಷ್ಯ ಇಂದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾನೆ. ಧೂಮಪಾನದಿಂದ ಶೇ. 90 ರಷ್ಟು ಜನರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಧೂಮಪಾನ ಮಾಡುವ ವ್ಯಕ್ತಿ, ತನ್ನ ಆರೋಗ್ಯ ಹಾಳುಮಾಡಿಕೊಳ್ಳುವುದರ ಜತೆಗೆ ತನ್ನ ಸುತ್ತಲು ಇರುವ ಸಮಾಜ ಮತ್ತು ಧೂಮಪಾನ ಮಾಡದ ವ್ಯಕ್ತಿಗಳನ್ನೂ ಅನಾರೋಗ್ಯಕ್ಕೆ ತುತ್ತಾಗುವಂತೆ ಮಾಡುತ್ತಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ. ಎಸ್‌.ನಾಗೇಂದ್ರ ಮಾತನಾಡಿ, ಯುವಜನತೆ ಮಾದಕ ವ್ಯಸನದ ದಾಸರಾಗಿದ್ದಾರೆ ಎಂಬುದು ಬೇಸರದ ಸಂಗತಿ. ಓದಲು ಬೇರೆ ಊರು ಮತ್ತು ರಾಜ್ಯಗಳಿಂದ ಬರುವ ಮಕ್ಕಳು ಇಲ್ಲಿ ಉತ್ತಮ ಶಿಕ್ಷ ಣ ಪಡೆಯಬೇಕು ಹೊರತು ಯಾವುದೇ ಮಾದಕ ವ್ಯಸನಕ್ಕೆ ಬಲಿಯಾಗಬಾರದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶೈಕ್ಷ ಣಿಕ ನಿರ್ದೇಶಕ ಡಾ.ಆರ್‌.ಪಿ.ಪೈ, ಮನೋವೈದ್ಯ ಡಾ.ಎಂ.ರಾಜೇಶ್‌ ಮಾತನಾಡಿದರು. ಈ ಸಂದರ್ಭ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿನಿ ರಜಿಯಾ ಅವರಿಗೆ ಬಹುಮಾನ ನೀಡಲಾಯಿತು. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕಿ ಡಾ.ವಿನಯಾ ಶ್ರೀನಿವಾಸ್‌, ಡಾ.ಲತಾ ನಾಗೇಂದ್ರ, ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಿ.ಎಸ್‌. ಸುರೇಶ್‌, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್‌.ಎಂ. ಕಟ್ಟಿ, ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲರಾದ ಡಾ.ವನ್ಮಲಾ ಸತೀಶ್‌, ವೈದ್ಯಕೀಯ ಅಧೀಕ್ಷ ಕ ಡಾ. ಬಿ.ಶ್ರೀನಿವಾಸ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ