ಆ್ಯಪ್ನಗರ

ರೈತರ ಒಕ್ಕಲೆಬ್ಬಿಸಬೇಡಿ, ಹಕ್ಕುಪತ್ರ ನೀಡಿ

ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸದೇ, ಹಕ್ಕುಪತ್ರ ನೀಡಬೇಕೆಂದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಜಿಲ್ಲಾಧ್ಯಕ್ಷ ಟಿ.ಚಂದ್ರಪ್ಪ ಒತ್ತಾಯಿಸಿದರು.

Vijaya Karnataka 19 Mar 2019, 5:00 am
ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸದೇ, ಹಕ್ಕುಪತ್ರ ನೀಡಬೇಕೆಂದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಜಿಲ್ಲಾಧ್ಯಕ್ಷ ಟಿ.ಚಂದ್ರಪ್ಪ ಒತ್ತಾಯಿಸಿದರು.
Vijaya Karnataka Web do not throw farmers rights
ರೈತರ ಒಕ್ಕಲೆಬ್ಬಿಸಬೇಡಿ, ಹಕ್ಕುಪತ್ರ ನೀಡಿ


ಸುದ್ದಿಗೋಷ್ಠಿಯಲ್ಲಿ ಸೋಮವಾರ ಅವರು ಮಾತನಾಡಿ, ಮೂರ್ನಾಲ್ಕು ತಲೆಮಾರುಗಳಿಂದ ಭೂಮಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿದರು.

ಬಗರ್‌ಹುಕುಂ ಹಾಗೂ ಅರಣ್ಯ ಹಕ್ಕು ಕಾಯ್ದೆ 2006 ಅಡಿಯಲ್ಲಿ ಅರ್ಜಿ ಸಲ್ಲಿಸಿ ಸ್ವಾಧಿಧೀನದಲ್ಲಿರುವ ಬಡ ರೈತಾಪಿ ಕುಟುಂಬಗಳಿಗೆ ಹಕ್ಕುಪತ್ರ ಕೊಡಬೇಕಾಗಿದೆ. ಫಾರಂ 50, 53ರಲ್ಲಿ ಹಾಗೂ 57ರಲ್ಲಿ ಅರ್ಜಿ ಸಲ್ಲಿಸಿರುವ ರೈತಾಪಿ ಕುಟುಂಬಗಳಿಗೆ ಜಿಲ್ಲಾಡಳಿತ ಹಾಗೂ ಸರಕಾರ ಹಕ್ಕು ಪತ್ರ ನೀಡಬೇಕು. ಕೂಡಲೇ ಬಗರ್‌ಹುಕುಂ ಸಮಿತಿ ರಚನೆ ಮಾಡಬೇಕೆಂದು ಆಗ್ರಹಿಸಿದರು.

ಜಿಲ್ಲೆಯ ಕೆಲ ಭಾಗಗಳಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಬಡ ರೈತಾಪಿಗಳ ಜಮೀನನ್ನು ಜೆಸಿಬಿ ಮೂಲಕ ತೆರವುಗೊಳಿಸಲು ಮುಂದಾಗಿದ್ದಾರೆ. ಅಧಿಧಿಕಾರಿಗಳು ಈ ಬಡ ರೈತರನ್ನು ಒಕ್ಕಲೆಬ್ಬಿಸುವ ಮತ್ತು ಅವರ ಜಮೀನಿನಲ್ಲಿ ಗುಂಡಿ ತೋಡುವ ಕ್ರಮದ ವಿರುದ್ಧ ನಮ್ಮ ವೇದಿಕೆ ಉಗ್ರ ಹೋರಾಟ ಹಮ್ಮಿಕೊಳ್ಳುತ್ತದೆ. ಈ ವಿಷಯಕ್ಕೆ ಸಂಬಂಧಿಧಿಸಿದಂತೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾ.27ರಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಗೋಷ್ಠಿಯಲ್ಲಿ ರೇಖ್ಯಾನಾಯ್ಕ, ಹುಚ್ರಾಯಪ್ಪ, ರಾಜಪ್ಪ, ರಮೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ