ಆ್ಯಪ್ನಗರ

ಕುವೆಂಪು ವಿವಿ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹ

ಕೊಡಗು ಅತಿವೃಷ್ಟಿ ಸಂತ್ರಸ್ತರ ನೆರವಿಗೆ ಧಾವಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಂಗಳವಾರ ಕುವೆಂಪು ವಿವಿ ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿ ಸಂಗ್ರಹಣ ಜಾಥಾ ನಡೆಯಿತು.

Vijaya Karnataka 22 Aug 2018, 5:00 am
ಶಿವಮೊಗ್ಗ : ಕೊಡಗು ಅತಿವೃಷ್ಟಿ ಸಂತ್ರಸ್ತರ ನೆರವಿಗೆ ಧಾವಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಂಗಳವಾರ ಕುವೆಂಪು ವಿವಿ ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿ ಸಂಗ್ರಹಣ ಜಾಥಾ ನಡೆಯಿತು.
Vijaya Karnataka Web SMR-21SMG2


ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ವಿವಿ ಕುಲಪತಿ ಪ್ರೊ.ಜೋಗನ್‌ ಶಂಕರ್‌, ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದಿನನಿತ್ಯದ ಅಗತ್ಯಗಳಿಗೆ ಕೂಡ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಪ್ರಮುಖ ಅಂಗವಾಗಿರುವ ವಿಶ್ವವಿದ್ಯಾಲಯಗಳಂತಹ ಶೈಕ್ಷ ಣಿಕ ಸಂಸ್ಥೆಗಳು ಪರಿಹಾರ ಮತ್ತು ಪುನರ್‌ನಿರ್ಮಾಣ ಕಾರ್ಯಗಳಿಗೆ ಕೈ ಜೋಡಿಸುವುದು ಅಗತ್ಯ ಎಂದರು.

ಕೊಡಗು ಅತಿವೃಷ್ಟಿ ಸಂತ್ರಸ್ತರ ನೆರವಿಗಾಗಿ ಈಗಾಗಲೇ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದ್ದು, ವಿದ್ಯಾರ್ಥಿಗಳಲ್ಲಿ ಕೂಡ ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ರೂಪಿಸುವ ಸಲುವಾಗಿ ಈ ಜಾಥಾ ಆಯೋಜಿಸಲಾಗಿದೆ ಎಂದರು.

ಜಾಥಾ ಉದ್ಘಾಟನಾ ಸಮಾರಂಭದಲ್ಲಿ ಕುಲಸಚಿವ ಪ್ರೊ.ಎಚ್‌.ಎಸ್‌.ಬೋಜ್ಯಾನಾಯ್ಕ್‌, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜಾನಾಯಕ್‌, ಹಣಕಾಸು ಅಧಿಕಾರಿ ಪ್ರೊ.ಹಿರೇಮಣಿ ನಾಯ್ಕ್‌, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

91,404 ರೂ.ದೇಣಿಗೆ ಸಂಗ್ರಹ

ಬೆಳಗ್ಗೆ 10ಕ್ಕೆ ಕುವೆಂಪು ಪ್ರತಿಮೆ ಎದುರು ಆರಂಭವಾದ ಜಾಥಾದಲ್ಲಿ ಸುಮಾರು 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಎಲ್ಲ ಸಿಬ್ಬಂದಿ ಭಾಗವಹಿಸಿದ್ದರು. ಬೃಹತ್‌ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ತಂಡತಂಡವಾಗಿ ಸಮೀಪದ ಶಂಕರಘಟ್ಟ, ಶಾಂತಿನಗರ, ಬಿ.ಆರ್‌ ಪ್ರಾಜೆಕ್ಟ್, ಮಾಳೇನಹಳ್ಳಿ, ನೆಲ್ಲಿಸರ ಮತ್ತಿತರ ಗ್ರಾಮಗಳಿಗೆ ಭೇಟಿನೀಡಿ 91,404ರೂ. ದೇಣಿಗೆ ಸಂಗ್ರಹಿಸಿದರು. ಈ ಹಣವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಸಂದಾಯ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ