ಆ್ಯಪ್ನಗರ

ಕರ್ತವ್ಯ ನಿರತ ಸಿಪಿಐ ಹೃದಯಾಘಾತದಿಂದ ನಿಧನ

ಕರ್ತವ್ಯ ನಿರತ ಸಾಗರ ಟೌನ್‌ ಪೊಲೀಸ್‌ ಠಾಣೆ ಸರ್ಕಲ್‌ ಇನ್ಸ್‌ಪೆಕ್ಟರ್‌ ರಮೇಶ್‌ (51) ಶನಿವಾರ ಹೃದಯಾಘಾತದಿಂದ ನಿಧನರಾದರು.

Vijaya Karnataka 14 Jan 2018, 5:00 am

ಶಿವಮೊಗ್ಗ: ಕರ್ತವ್ಯ ನಿರತ ಸಾಗರ ಟೌನ್‌ ಪೊಲೀಸ್‌ ಠಾಣೆ ಸರ್ಕಲ್‌ ಇನ್ಸ್‌ಪೆಕ್ಟರ್‌ ರಮೇಶ್‌ (51) ಶನಿವಾರ ಹೃದಯಾಘಾತದಿಂದ ನಿಧನರಾದರು.

ಇವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮೂಲತಃ ಬಳ್ಳಾರಿ ಜಿಲ್ಲೆಯವರಾದ ಕೆ. ರಮೇಶ್‌, 5 ತಿಂಗಳ ಹಿಂದೆ ಸಾಗರ ಪೇಟೆ ಠಾಣೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಆಗಿ ವರ್ಗಾವಣೆಯಾಗಿ ಬಂದಿದ್ದರು.

ಇವರು ಹಿಂದೆ ಕಾರ್ಗಲ್‌, ಮಾಳೂರು, ಸೊರಬ, ಆನವಟ್ಟಿ ಮತ್ತಿತರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಎಸಿಬಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಸಹ ಸೇವೆ ಸಲ್ಲಿಸಿದ್ದರು. ಶುಕ್ರವಾರ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರು ಸಾಗರಕ್ಕೆ ಆಗಮಿಸಿದ್ದ ಸಂದರ್ಭ ಭದ್ರತಾ ವ್ಯವಸ್ಥೆಗೆ ನಿಯೋಜನೆಗೊಂಡಿದ್ದರು.

ಕ್ರೀಡಾಕೂಟ ಸ್ಥಗಿತ:

ಜಿಲ್ಲಾ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಶುಕ್ರವಾರದಿಂದ ಆರಂಭವಾದ ಜಿಲ್ಲಾ ಪೊಲೀಸ್‌ ಕ್ರೀಡಾಕೂಟವನ್ನು ರಮೇಶ್‌ ನಿಧನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಯಿತು. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್‌ ಕ್ರೀಡಾಪಟುಗಳು ಸಭೆ ಸೇರಿ ಸಹೋದ್ಯೋಗಿ ಆತ್ಮಕ್ಕೆ ಶಾಂತಿ ಕೋರಿದರು. ಶಿವಮೊಗ್ಗದ ಡಿಎಆರ್‌ ಮೈದಾನದಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌, ಎಸ್ಪಿ ಅಭಿನವ ಖರೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ