ಆ್ಯಪ್ನಗರ

ಸಾಗರದಲ್ಲಿ ಎಜ್ಯುಕೇಷನ್‌ ಹಬ್‌: ಶಾಸಕ

ಮುಂದಿನ ಶೈಕ್ಷ ಣಿಕ ವರ್ಷದಲ್ಲಿ ಸರಕಾರಿ ಪದವಿಪೂರ್ವ ಕಾಲೇಜನ್ನು ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅತ್ಯಂತ ಸುಸಜ್ಜಿತ ಮಾದರಿಯಲ್ಲಿ ನಿರ್ಮಾಣ ಮಾಡಲು ವ್ಯವಸ್ಥೆಯಾಗಿದೆ ಎಂದು ಶಾಸಕ ಎಚ್‌.ಹಾಲಪ್ಪ ಹೇಳಿದರು.

Vijaya Karnataka 6 Feb 2019, 5:00 am
ಸಾಗರ: ಮುಂದಿನ ಶೈಕ್ಷ ಣಿಕ ವರ್ಷದಲ್ಲಿ ಸರಕಾರಿ ಪದವಿಪೂರ್ವ ಕಾಲೇಜನ್ನು ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅತ್ಯಂತ ಸುಸಜ್ಜಿತ ಮಾದರಿಯಲ್ಲಿ ನಿರ್ಮಾಣ ಮಾಡಲು ವ್ಯವಸ್ಥೆಯಾಗಿದೆ ಎಂದು ಶಾಸಕ ಎಚ್‌.ಹಾಲಪ್ಪ ಹೇಳಿದರು.
Vijaya Karnataka Web SMR-05SGR2


ಇಲ್ಲಿನ ಬಿ.ಎಚ್‌.ರಸ್ತೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಪದವಿಪೂರ್ವ ಶಿಕ್ಷ ಣ ಇಲಾಖೆ ಮತ್ತು ನಗರಸಭೆ ವತಿಯಿಂದ ನಬಾರ್ಡ್‌ ಸೇರಿದಂತೆ ವಿವಿಧ ಯೋಜನೆಯಡಿ 2.24 ಕೋಟಿ ರೂ. ವೆಚ್ಚದಲ್ಲಿ ನೂತನ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಮೊದಲ ಹಂತದಲ್ಲಿ 2.24 ಕೋಟಿ ರೂ. ವೆಚ್ಚದಲ್ಲಿ 6 ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಹೆಚ್ಚುವರಿಯಾಗಿ 1 ಕೋಟಿ ರೂ. ಹಣ ಬಿಡುಗಡೆಯಾಗಿದೆ. ನಾಲ್ಕು ಅಂತಸ್ತಿನ ಕಟ್ಟಡ ಹಾಗೂ ಸುಸಜ್ಜಿತ ಲಿಫ್ಟ್‌ಗೆ ಅವಕಾಶ ಕಲ್ಪಿಸಿಕೊಂಡು ಸುಮಾರು 50 ವರ್ಷ ಕಾಲ ಬಾಳಿಕೆ ಬರುವ ಶಾಶ್ವತ ಕಟ್ಟಡ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ರೈಲು ಹಾಗೂ ಬಸ್‌ ನಿಲ್ದಾಣ ಸಮೀಪದ ಇರುವುದರಿಂದ ಈ ಕಾಲೇಜಿಗೆ ಬಾರಿ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಈ ಕಾಲೇಜನ್ನು ಆಧುನಿಕವಾಗಿ ರೂಪಿಸುವ ಹಾಗೂ ಎಜ್ಯುಕೇಷನ್‌ ಹಬ್‌ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಸುಸಜ್ಜಿತ ಶೌಚಾಲಯ ಸೇರಿದಂತೆ ಅಗತ್ಯ ಕೆಲಸಕಾರ‍್ಯ ಮಾಡಲಾಗುವುದು. ಸಾಗರ, ಹೊಸನಗರ, ರಿಪ್ಪನ್‌ಪೇಟೆ ಪದವಿ ಕಾಲೇಜುಗಳ ಅಭಿವೃದ್ಧಿಗೆ 13 ಕೋಟಿ ರೂ. ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಜಿ.ಪಂ. ಸದಸ್ಯ ಭೀಮನೇರಿ ಶಿವಪ್ಪ, ತಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸ್ಥಾಯಿ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ನಗರಸಭೆ ಅಧ್ಯಕ್ಷೆ ವೀಣಾ ಪರಮೇಶ್ವರ್‌, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎಚ್‌.ರಾಘವೇಂದ್ರ, ಪ್ರಾಚಾರ್ಯ ಶಂಕರಮೂರ್ತಿ, ಕ್ಷೇತ್ರ ಶಿಕ್ಷ ಣಾಧಿಕಾರಿ ಕೆ.ಆರ್‌.ಬಿಂಬ, ಕಾರ್ಯಪಾಲಕ ಎಂಜಿನಿಯರ್‌ ಎ.ಹಾಲೇಶಪ್ಪ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಪರಮೇಶ್ವರಪ್ಪ , ಉಪನ್ಯಾಸಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ