ಆ್ಯಪ್ನಗರ

ಶಿಕ್ಷಣ ಜತೆಗೆ ವೃತ್ತಿಪರ ಕೌಶಲ ಅಗತ್ಯ

ವಿದ್ಯಾರ್ಥಿಗಳು ಸಾಂಪ್ರದಾಯಿಕ ಶಿಕ್ಷಣದ ಜತೆಗೆ ವಿಶೇಷ ಕೌಶಲ ಪಡೆದುಕೊಳ್ಳುವುದರಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿಯಶಸ್ಸು ಗಳಿಸಲು ಸಾಧ್ಯ ಎಂದು ಎಟಿಎನ್‌ಸಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುರೇಶ್‌ ಅಭಿಪ್ರಾಯಪಟ್ಟರು.

Vijaya Karnataka 1 Sep 2019, 5:00 am
ಶಂಕರಘಟ್ಟ: ವಿದ್ಯಾರ್ಥಿಗಳು ಸಾಂಪ್ರದಾಯಿಕ ಶಿಕ್ಷಣದ ಜತೆಗೆ ವಿಶೇಷ ಕೌಶಲ ಪಡೆದುಕೊಳ್ಳುವುದರಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿಯಶಸ್ಸು ಗಳಿಸಲು ಸಾಧ್ಯ ಎಂದು ಎಟಿಎನ್‌ಸಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುರೇಶ್‌ ಅಭಿಪ್ರಾಯಪಟ್ಟರು.
Vijaya Karnataka Web education requires professional skills
ಶಿಕ್ಷಣ ಜತೆಗೆ ವೃತ್ತಿಪರ ಕೌಶಲ ಅಗತ್ಯ


ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಜೀವನ ಕೌಶಲ ಕುರಿತು ಶನಿವಾರ ಆಯೋಜಿಸಿದ್ದ ಕಾರಾರ‍ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಕಾಲೀನ ಮಾರುಕಟ್ಟೆ ಆಧಾರಿತ ಆರ್ಥಿಕ ವ್ಯವಸ್ಥೆಯಲ್ಲಿಉದ್ಯೋಗ ಗಿಟ್ಟಿಸಬೇಕಾದರೆ ಕೇವಲ ಪದವಿ ಇದ್ದರೆ ಸಾಲದು. ಕಾಲೇಜು, ವಿಶ್ವವಿದ್ಯಾಲಯಗಳಿಂದ ಪಡೆದ ಶಿಕ್ಷಣದ ಜತೆಗೆ ವಿವಿಧ ವಲಯಗಳಿಗೆ ಪೂರಕವಾದ ವೃತ್ತಿಪರ ಕೌಶಲ ಕಲಿತುಕೊಳ್ಳುವುದು ಅತ್ಯಗತ್ಯ. ಇದನ್ನು ಮನಗಂಡು ಸರಕಾರ ಕೌಶಲ್ಯ ಭಾರತ ಯೋಜನೆ ಜಾರಿಗೆ ತಂದಿದೆ ಎಂದರು. ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿ ಡಾ.ಕೆ.ವಿ.ಗಿರಿಧರ ಪ್ರಾಸ್ತಾವಿಕ ಮಾತನಾಡಿದರು. ವಿವಿ ವ್ಯಾಪ್ತಿಯ ಪದವಿ ಕಾಲೇಜುಗಳಿಂದ ಸ್ವಯಂ ಸೇವಕರು ಭಾಗವಹಿಸಿದ್ದರು. ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ಆರ್‌.ಕವಿತ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ