ಆ್ಯಪ್ನಗರ

ಶೃಂಗೇರಿ ಶ್ರೀಗಳ ಅದ್ಧೂರಿ ಪುರಪ್ರವೇಶ

ತಾಲೂಕಿನ ಇತಿಹಾಸ ಪ್ರಸಿದ್ಧ ಬಿದನೂರು ನಗರದಲ್ಲಿ ಶ್ರೀನೀಲಕಂಠೇಶ್ವರ ಸ್ವಾಮಿ ಪುನರ್‌ ಪ್ರತಿಷ್ಠಾಪನಾ ಮತ್ತು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿರುವ ಶೃಂಗೇರಿ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರ ಪುರಪ್ರವೇಶ ಗುರುವಾರ ಸಂಜೆ ನಡೆಯಿತು.

Vijaya Karnataka 26 Apr 2019, 5:00 am
ಹೊಸನಗರ: ತಾಲೂಕಿನ ಇತಿಹಾಸ ಪ್ರಸಿದ್ಧ ಬಿದನೂರು ನಗರದಲ್ಲಿ ಶ್ರೀನೀಲಕಂಠೇಶ್ವರ ಸ್ವಾಮಿ ಪುನರ್‌ ಪ್ರತಿಷ್ಠಾಪನಾ ಮತ್ತು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿರುವ ಶೃಂಗೇರಿ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರ ಪುರಪ್ರವೇಶ ಗುರುವಾರ ಸಂಜೆ ನಡೆಯಿತು.
Vijaya Karnataka Web smr-25hosp6


ನಗರ ಸಮೀಪದ ಚಿಕ್ಕಪೇಟೆಯಿಂದ ತೆರೆದ ವಾಹನದ ಪಲ್ಲಕ್ಕಿಯಲ್ಲಿ ವಿರಾಜಾಮಾನವಾಗಿದ್ದ ಶ್ರೀಗಳಿಗೆ ಪೂರ್ಣಕುಂಭದೊಂದಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ನಂತರ ದೇಗುಲದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಸಭಾಭವನವನ್ನು ಶ್ರೀಗಳು ಲೋಕಾರ್ಪಣೆಗೊಳಿಸಿದರು. ದೇಗುಲಕ್ಕೆ ಆಗಮಿಸಿದ ಶ್ರೀಗಳಿಗೆ ಧೂಳಿ ಪಾದಪೂಜೆ ನೆರವೇರಿಸಲಾಯಿತು. ಈ ಸಂದರ್ಭ ದೇಗುಲ ಸಮಿತಿ ಪ್ರಮುಖರು, ಊರಿನ ಗಣ್ಯರು, ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ