ಆ್ಯಪ್ನಗರ

ಪರಿಸರ ಜಾಗೃತಿ, ಸೈಕಲ್‌ ಜಾಥಾ

ನಾಡ ಹಬ್ಬ ದಸರಾ ಅಂಗವಾಗಿ ನಡೆಯುತ್ತಿರುವ ಪರಿಸರ ದಸರಾ ಅಂಗವಾಗಿ ಶುಕ್ರವಾರ ನಗರದಲ್ಲಿಪರಿಸರ ಅರಿವು ಜಾಥಾ ನಡೆಯಿತು.

Vijaya Karnataka 5 Oct 2019, 5:00 am
ಶಿವಮೊಗ್ಗ: ನಾಡ ಹಬ್ಬ ದಸರಾ ಅಂಗವಾಗಿ ನಡೆಯುತ್ತಿರುವ ಪರಿಸರ ದಸರಾ ಅಂಗವಾಗಿ ಶುಕ್ರವಾರ ನಗರದಲ್ಲಿಪರಿಸರ ಅರಿವು ಜಾಥಾ ನಡೆಯಿತು.
Vijaya Karnataka Web 4GANESH2_46


ಪರಿಸರ ಮಾಲಿನ್ಯದ ಬಗ್ಗೆ ಅರಿವು ಜಾಥಾ ನಗರದ ಶಿವಪ್ಪನಾಯಕ ವೃತ್ತದಿಂದ ಆರಂಭಗೊಂಡು, ಅಮೀರ್‌ ಅಹಮ್ಮದ್‌ ವೃತ್ತಮಾರ್ಗವಾಗಿ ಗೋಪಿವೃತ್ತ ಆಗಮಿಸಿತ್ತು. ಅಲ್ಲಿವಿದ್ಯಾರ್ಥಿಗಳು ಪರಿಸರ ಜಾಗೃತಿ ಕುರಿತು ಬೀದಿ ನಾಟಕ, ನೃತ್ಯ ನಡೆಯಿತು. ನಗರದ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪಾಲಿಕೆ ಉಪಮೇಯರ್‌ ಎಸ್‌.ಎನ್‌.ಚೆನ್ನಬಸಪ್ಪ ಇತರರು ಇದ್ದರು. ಕಮಲಾ ನೆಹರು ಕಾಲೇಜು, ಕಟೀಲ್‌ ಅಶೋಕ್‌ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಸೈಕಲ್‌ ಜಾಥಾ: ಮಹಾನಗರ ಪಾಲಿಕೆ ವತಿಯಿಂದ ಆರಂಭಗೊಂಡ ಸೈಕಲ್‌ ಜಾಥಾಕ್ಕೆ ಎಸ್ಪಿ ಕೆ.ಎಂ.ಶಾಂತರಾಜು ಚಾಲನೆ ನೀಡಿದರು. ಈ ಸಂದರ್ಭ ಪಾಲಿಕೆ ಉಪಮೇಯರ್‌ ಎಸ್‌.ಎನ್‌.ಚೆನ್ನಬಸಪ್ಪ, ಪರಿಸರ ದಸರಾ ಸಮಿತಿ ಅಧ್ಯಕ್ಷೆ ರೇಖಾ ರಂಗನಾಥ್‌, ಸದಸ್ಯರಾದ ಸುವರ್ಣ ಶಂಕರ್‌, ಎಚ್‌.ಸಿ.ಯೋಗೀಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ