ಆ್ಯಪ್ನಗರ

ಶರಣರಿಂದ ಸಮ ಸಮಾಜ ನಿರ್ಮಾಣ

ಶರಣರ ವಚನಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ವ್ಯಾಪಕವಾಗಬೇಕು ಎಂದು ತಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.

Vijaya Karnataka 17 Jul 2019, 5:00 am
ಸಾಗರ : ಶರಣರ ವಚನಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ವ್ಯಾಪಕವಾಗಬೇಕು ಎಂದು ತಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.
Vijaya Karnataka Web SMR-16sgr14


ಇಲ್ಲಿನ ತಹಸೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಶರಣರು ಸಮ ಸಮಾಜ ನಿರ್ಮಾಣಕ್ಕೆ ತಮ್ಮ ವಚನಗಳ ಮೂಲಕ ಮಾರ್ಗದರ್ಶನ ಮಾಡಿದ್ದಾರೆ. ಶಿವಶರಣ ಹಡಪದ ಅಪ್ಪಣ್ಣ ಸಾಮಾಜಿಕ ಬದಲಾವಣೆಗಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದರು.

ವಿಶೇಷ ಉಪನ್ಯಾಸ ನೀಡಿದ ಉಪನ್ಯಾಸಕ ಎಸ್‌.ಎನ್‌.ಪಾಲಾಕ್ಷ ಪ್ಪ ಮಾತನಾಡಿ, ಸಂಸತ್‌ ನಿರ್ಮಾಣದ ಪರಿಕಲ್ಪನೆಯನ್ನು ಮೊದಲ ಬಾರಿಗೆ ಹಡಪದ ಅಪ್ಪಣ್ಣನವರು ಮಾಡಿದ್ದಾರೆ. ಬಸವಣ್ಣನವರ ಆಪ್ತರಾಗಿದ್ದ ಹಡಪದ ಅಪ್ಪಣ್ಣನವರು ವಚನ ಚಳವಳಿ ಸಂದರ್ಭ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು.

ತಹಸೀಲ್ದಾರ್‌ ಚಂದ್ರಶೇಖರ ನಾಯ್ಕ್‌ ಅಧ್ಯಕ್ಷ ತೆ ವಹಿಸಿದ್ದರು. ನಗರಸಭೆ ಸದಸ್ಯರಾದ ಮಧುಮಾಲತಿ, ಕುಸುಮ ಸುಬ್ಬಣ್ಣ, ಮಧುರ ಶಿವಾನಂದ್‌, ಭಾವನ, ಎಸ್‌.ಲಿಂಗರಾಜ್‌ ಮತ್ತಿತರರು ಹಾಜರಿದ್ದರು. ಕಲ್ಲಪ್ಪ ಮೆಣಸಿನಾಳ್‌ ಸ್ವಾಗತಿಸಿ, ಜಿ.ಬಸವರಾಜ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ