ಆ್ಯಪ್ನಗರ

ಎಚ್‌ಡಿಕೆ ರಾಜೀನಾಮೆಗೆ ಈಶ್ವರಪ್ಪ ಆಗ್ರಹ

ಗೌಪ್ಯತೆಯನ್ನು ಕಾಪಾಡುವಲ್ಲಿ ವಿಫಲರಾದ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಪಾಲರು ಕೂಡಲೇ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಬೇಕೆಂದು ಶಾಸಕ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದ್ದಾರೆ.

Vijaya Karnataka 29 Mar 2019, 5:00 am
ಶಿವಮೊಗ್ಗ : ಗೌಪ್ಯತೆಯನ್ನು ಕಾಪಾಡುವಲ್ಲಿ ವಿಫಲರಾದ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಪಾಲರು ಕೂಡಲೇ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಬೇಕೆಂದು ಶಾಸಕ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದ್ದಾರೆ.
Vijaya Karnataka Web eshwarappas demand for resignation
ಎಚ್‌ಡಿಕೆ ರಾಜೀನಾಮೆಗೆ ಈಶ್ವರಪ್ಪ ಆಗ್ರಹ


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗುಪ್ತಚರ ಮಾಹಿತಿಯನ್ನು ಆಧರಿಸಿ ಸಿಎಂ ಕುಮಾರಸ್ವಾಮಿ ಅವರು ಬುಧವಾರದಂದು ನಾಳೆ ಜೆಡಿಎಸ್‌ ಮುಖಂಡರ ಮನೆಗಳ ಮೇಲೆ ಐಟಿ ರೈಡ್‌ ಆಗಲಿದೆ, ಅದಕ್ಕಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ಸೋರಿಕೆ ಮಾಡಿದ್ದರು. ಗುಪ್ತಚರ ಇಲಾಖೆ ಸಿಎಂ ಅವರ ಬಳಿಯೆ ಇರುವುದರಿಂದ ತಮಗೆ ದೊರೆತ ಮಾಹಿತಿಯ ಗೌಪ್ಯತೆ ಕಾಪಾಡದೆ ಕಳ್ಳರಿಗೆ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಟೀಕಿಸಿದರು.

ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಗೌಪ್ಯತೆ ಕಾಪಾಡುತ್ತೇನೆಂದು ಪ್ರಮಾಣ ಮಾಡಿದ ಅವರು ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಮೂಲಕ ತಾವೊಬ್ಬ ಅಯೋಗ್ಯ ಸಿಎಂ ಎಂದು ತೋರಿಸಿಕೊಂಡಿದ್ದಾರೆ. ಹೀಗಾಗಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಪಾಲರೇ ಅವರನ್ನು ಪದಚ್ಯುತಗೊಳಿಸಬೇಕೆಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ