ಆ್ಯಪ್ನಗರ

ಎಟಿಎನ್‌ಸಿ ಕಾಲೇಜಿನಲ್ಲಿ ಸಂಜೆ ಕಾಲೇಜು ಆರಂಭ

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷ ಣಿಕ ಸಾಲಿನಿಂದ ಸಂಜೆ ಕಾಲೇಜನ್ನು ಪುನಾರಂಭಿಸಲಾಗುತ್ತಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪಿ.ಆರ್‌.ದಯಾನಂದ ಹೇಳಿದರು

Vijaya Karnataka 1 May 2018, 5:00 am
ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷ ಣಿಕ ಸಾಲಿನಿಂದ ಸಂಜೆ ಕಾಲೇಜನ್ನು ಪುನಾರಂಭಿಸಲಾಗುತ್ತಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪಿ.ಆರ್‌.ದಯಾನಂದ ಹೇಳಿದರು
Vijaya Karnataka Web evening college start at atnc college
ಎಟಿಎನ್‌ಸಿ ಕಾಲೇಜಿನಲ್ಲಿ ಸಂಜೆ ಕಾಲೇಜು ಆರಂಭ


ಸುದ್ದಿಗೋಷ್ಠಿಯಲ್ಲಿ ಸೋಮವಾರ ಅವರು ಮಾತನಾಡಿ, ಈ ಹಿಂದೆ ಸಂಜೆ ಕಾಲೇಜು ಆರಂಭಿಸಲಾಗಿತ್ತು. ಆದರೆ ಕಾರಣಾಂತರಗಳಿಂದ 2003ರಿಂದ ಸ್ಥಗಿತಗೊಳಿಸಲಾಗಿತ್ತು. ಈಗ ಬಿಕಾಂ ವಿದ್ಯಾರ್ಥಿಗಳಿಂದ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಮಾನ್ಯತೆಯೊಂದಿಗೆ ಪ್ರಥಮ ಬಿಕಾಂ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಅತ್ಯಂತ ಕಡಿಮೆ ಶಿಕ್ಷ ಣ ಶುಲ್ಕ ಹಾಗೂ ಯಾವುದೇ ಡೊನೇಷನ್‌ ಇಲ್ಲದೇ, ಸಿಎ, ಐಎಎಸ್‌, ಐಬಿಪಿಎಸ್‌ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಮಾಹಿತಿ, ವಿದ್ಯಾರ್ಥಿ ವೇತನದ ಸೌಲಭ್ಯ, ಕಂಪ್ಯೂಟರ್‌ ಲ್ಯಾಬ್‌, ಡಿಜಿಟಲ್‌ ಲೈಬ್ರರಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾದ ನಿರೀಕ್ಷ ಣಾ ಕೊಠಡಿ ಹಾಗೂ ಹಾಸ್ಟೆಲ್‌ ವ್ಯವಸ್ಥೆ, ಪ್ರತಿ ಕೊಠಡಿಗೆ ಸಿಸಿ ಟಿವಿ ಅಳವಡಿಕೆ ಹೀಗೆ ಹಲವು ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಸಂಜೆ ಕಾಲೇಜಿಗೆ ಈಗಾಗಲೇ ಪ್ರವೇಶ ಆರಂಭವಾಗಿದ್ದು, ಹೆಚ್ಚಿನ ಮಾಹಿತಿಗೆ ಮೊ.9480023207, 9844665591 ಅಥವಾ 08182-279180ರಲ್ಲಿ ಸಂಪರ್ಕಿಸಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಆರ್‌. ಎಲ್‌.ಪ್ರಕಾಶ್‌ಬಾಬು, ಡಿ.ಎಸ್‌.ಮಂಜುನಾಥ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ