ಆ್ಯಪ್ನಗರ

ಕಣ್ಣು ದಾನಕ್ಕೆ ಒಪ್ಪಿಗೆ : ವಿದ್ಯಾರ್ಥಿನಿಯರ ಕಾಳಜಿಗೆ ಮೆಚ್ಚುಗೆ

ನಗರದ ಕಮಲ ನೆಹರು ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಕಣ್ಣು ದಾನಕ್ಕೆ ಒಪ್ಪಿಗೆ ಸೂಚಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

Vijaya Karnataka 14 Jun 2019, 5:00 am
ಕಣ್ಣು ದಾನಕ್ಕೆ ಒಪ್ಪಿಗೆ: ವಿದ್ಯಾರ್ಥಿನಿಯರ ಕಾಳಜಿಗೆ ಮೆಚ್ಚುಗೆ (ಇಂದೇ ಬಳಸಿ)
Vijaya Karnataka Web SMR-13GANESH5


ಶಿವಮೊಗ್ಗ : ನಗರದ ಕಮಲ ನೆಹರು ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಕಣ್ಣು ದಾನಕ್ಕೆ ಒಪ್ಪಿಗೆ ಸೂಚಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಕಾಲೇಜಿನ ಎನ್‌ಎಸ್‌ಎಸ್‌ ಸ್ವಯಂಸೇವಕಿಯರಾದ ಎನ್‌.ಅಂಜು, ಎಸ್‌.ಡಿ.ವೀಣಾ ಮತ್ತು ಮೇಘನಾ, ಎನ್‌.ತೇಜಸ್ವಿನಿ ತಮ್ಮ ಕಣ್ಣು ದಾನಕ್ಕೆ ಒಪ್ಪಿಗೆ ಸೂಚಿಸಿದ ವರು. ಕಣ್ಣಿಲ್ಲದವರ ಬಾಳಿಗೆ ಬೆಳಕಾಗಿ ಮುಂದಿನ ಜನ್ಮದಲ್ಲೂ ನಾವು ಜಗತ್ತನ್ನು ಕಾಣುವಂತಾಗಬೇಕೆಂಬ ಹಂಬಲದಿಂದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡಲು ಒಪ್ಪಿಕೊಂಡಿದ್ದಾಗಿ ಅವರು ಪ್ರತಿಕ್ರಿಯಿಸಿದರು.

ವಿದ್ಯಾರ್ಥಿನಿಯರ ಈ ಕಾರ್ಯಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಟಿ.ಪಾರ್ವತಮ್ಮ ಹಾಗೂ ಅಧ್ಯಾಪಕ-ಅಧ್ಯಾಪಕೇತರ ವರ್ಗ ಶ್ಲಾಘಿಸಿದೆ.

ವಿದ್ಯಾರ್ಥಿನಿಯರಿಗೆ ಸನ್ಮಾನ:

ಕಮಲ ನೆಹರು ಕಾಲೇಜಿನಲ್ಲಿ ಗುರುವಾರ ಎನ್‌ಎಸ್‌ಎಸ್‌ ಏರ್ಪಡಿಸಿದ್ದ ಪುನಶ್ಚೇತನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಕುವೆಂಪು ವಿವಿ ಎನ್‌ಎಸ್‌ಎಸ್‌ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಕುಂದನ್‌ ಬಸವರಾಜ್‌, ಪ್ರಾಂಶುಪಾಲರಾದ ಡಾ.ಕೆ.ಟಿ.ಪಾರ್ವತಮ್ಮ, ಕಾರ್ಯಕ್ರಮಾಧಿಕಾರಿಗಳಾದ ಡಾ.ಬಾಲಕೃಷ್ಣ ಹೆಗಡೆ, ವಿದ್ವಾನ್‌ ಮಂಜುನಾಥ್‌ ಭಟ್‌ ಮತ್ತಿತರರು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ