ಆ್ಯಪ್ನಗರ

ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವು

ಪಟ್ಟಣಕ್ಕೆ ಸಮೀಪದ ಕೆಂಜಿಗಾಪುರದಲ್ಲಿ ರೈತನೊಬ್ಬ ಕೃಷಿ ಹೊಂಡಕ್ಕೆ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

Vijaya Karnataka 4 Aug 2019, 5:00 am
ಆನಂದಪುರ: ಪಟ್ಟಣಕ್ಕೆ ಸಮೀಪದ ಕೆಂಜಿಗಾಪುರದಲ್ಲಿ ರೈತನೊಬ್ಬ ಕೃಷಿ ಹೊಂಡಕ್ಕೆ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
Vijaya Karnataka Web farmer died into the farm pits fall
ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವು

ಕೆಂಜಿಗಾಪುರ ನಿವಾಸಿ ಅರುಣ್‌ಕುಮಾರ್‌ (35) ಮೃತಪಟ್ಟವರು. ಬೆಳಗ್ಗೆ ಜಮೀನಿಗೆ ನೀರು ಹಾಯಿಸಲು ಹೋದ ಸಂದರ್ಭ ಕಾಲು ಜಾರಿ ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದಿದ್ದಾರೆ. ಈ ಸಂದರ್ಭ ಅವರ ಜತೆಗಿದ್ದ ತಾಯಿ ಕೂಗಿಕೊಂಡಾಗ ಸ್ಥಳೀಯರು ಆಗಮಿಸಿ ಮೇಲೆತ್ತಿ ಆನಂದಪುರ ಸಮುದಾಯ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.

ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ