ಆ್ಯಪ್ನಗರ

ಮಠದ ಗೋಶಾಲೆಯಲ್ಲಿ ಬೆಂಕಿ ಆಕಸ್ಮಿಕ: ಎರಡು ಹಸು ಸಾವು

ರಾಮಚಂದ್ರಾಪುರ ಮಠದ ಗೋಶಾಲೆಯಲ್ಲಿ ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಎರಡು ಹಸುಗಳು ಮೃತಪಟ್ಟಿವೆ.

Vijaya Karnataka 6 Jan 2019, 5:00 am
ಹೊಸನಗರ: ರಾಮಚಂದ್ರಾಪುರ ಮಠದ ಗೋಶಾಲೆಯಲ್ಲಿ ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಎರಡು ಹಸುಗಳು ಮೃತಪಟ್ಟಿವೆ.
Vijaya Karnataka Web fire accident in goshal two cows die
ಮಠದ ಗೋಶಾಲೆಯಲ್ಲಿ ಬೆಂಕಿ ಆಕಸ್ಮಿಕ: ಎರಡು ಹಸು ಸಾವು


ಮಠದ ಸಮೀಪದಲ್ಲಿರುವ ಗೋಶಾಲೆ ಪಕ್ಕದಲ್ಲಿ ಭತ್ತದ ಹುಲ್ಲನ್ನು ಬಣವೆ ಹಾಕಿ ಸಂಗ್ರಹಿಸಿಡಲಾಗಿತ್ತು. ರಸ್ತೆ ಪಕ್ಕದಲ್ಲಿದ್ದ ಬಣವೆಯಲ್ಲಿ ಮಧ್ಯಾಹ್ನದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿತು. ಇಡೀ ಬಣವೆಯನ್ನು ಆವರಿಸಿದ ಬೆಂಕಿ ಕ್ಷ ಣ ಮಾತ್ರದಲ್ಲಿ ಪಕ್ಕದಲ್ಲಿಯೇ ಇದ್ದ ಗೋಶಾಲೆಯ ಕೊಟ್ಟಿಗೆಗೂ ತಗುಲಿತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ, ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಮಲೆನಾಡು ಗಿಡ್ಡ ತಳಿಯ ಎರಡು ಹಸುಗಳು ಮೃತಪಟ್ಟಿವೆ. ಸುಮಾರು 2 ಲೋಡು ಹುಲ್ಲು, ಕೊಟ್ಟಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 4 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ