ಆ್ಯಪ್ನಗರ

ರೈಲು ಎಂಜಿನ್‌ನಲ್ಲಿ ಬೆಂಕಿ

ತಾಳಗುಪ್ಪ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಸೋಮವಾರ ಮಧ್ಯರಾತ್ರಿ ಸುಮಾರು ಎರಡೂವರೆ ಗಂಟೆಗಳ ಕಾಲ ಭದ್ರಾವತಿಯಲ್ಲಿ ನಿಂತಿತ್ತು.

Vijaya Karnataka 22 May 2019, 5:00 am
ಶಿವಮೊಗ್ಗ : ತಾಳಗುಪ್ಪ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಸೋಮವಾರ ಮಧ್ಯರಾತ್ರಿ ಸುಮಾರು ಎರಡೂವರೆ ಗಂಟೆಗಳ ಕಾಲ ಭದ್ರಾವತಿಯಲ್ಲಿ ನಿಂತಿತ್ತು.
Vijaya Karnataka Web fire in a train engine
ರೈಲು ಎಂಜಿನ್‌ನಲ್ಲಿ ಬೆಂಕಿ


ಸೋಮವಾರ ರಾತ್ರಿ 11ಗಂಟೆ ಹೊತ್ತಿಗೆ ಭದ್ರಾವತಿ ತಲುಪಿದ ರೈಲಿನ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿತು. ಇದನ್ನು ಗುರುತಿಸಿದ ಎಂಜಿನ್‌ ಚಾಲಕರು ಅಧಿಕಾರಿಗಳಿಗೆ ಮಾಹಿತಿ ನೀಡಿ ಪ್ರಯಾಣಿಕರ ಬೋಗಿಗಳನ್ನು ಎಂಜಿನ್‌ನಿಂದ ಬೇರ್ಪಡಿಸಿ ನಿಲ್ಲಿಸಿ ಬೆಂಕಿಯನ್ನು ನಂದಿಸಿದರು.

ಬಳಿಕ ಬೀರೂರಿನಿಂದ ಬದಲಿ ಎಂಜಿನ್‌ ತರಿಸಿ ಮಧ್ಯರಾತ್ರಿ 1.40ರ ಹೊತ್ತಿಗೆ ಪ್ರಯಾಣ ಮುಂದುವರಿಸಲಾಯಿತು. ಹೀಗಾಗಿ, ರೈಲು ಬೆಂಗಳೂರು ತಲುಪುವಾಗ ಬೆಳಗ್ಗೆ 7ಗಂಟೆಯಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ