ಆ್ಯಪ್ನಗರ

ಟೀಕೆ ಬಿಡಿ, ಮೊದಲು ವೋಟ್‌ ಮಾಡಿ

ನಮ್ಮನ್ನಾಳುವ ಜನಪ್ರತಿನಿಧಿಗಳ ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು ಸಂವಿಧಾನ ನಮಗೆ ನೀಡಿದ್ದರೂ, ಮತ ಚಲಾಯಿಸದೆ ಮುಂದೆ ವ್ಯವಸ್ಥೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಎಂ.ಹಿರೇಮಠ್‌ ಹೇಳಿದರು.

Vijaya Karnataka 26 Mar 2019, 5:00 am
ಶಿವಮೊಗ್ಗ: ನಮ್ಮನ್ನಾಳುವ ಜನಪ್ರತಿನಿಧಿಗಳ ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು ಸಂವಿಧಾನ ನಮಗೆ ನೀಡಿದ್ದರೂ, ಮತ ಚಲಾಯಿಸದೆ ಮುಂದೆ ವ್ಯವಸ್ಥೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಎಂ.ಹಿರೇಮಠ್‌ ಹೇಳಿದರು.
Vijaya Karnataka Web SMR-25GANESH2


ನಗರದ ಕುವೆಂಪು ರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಾನಗರಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತುಂಗಾ ಜಿಲ್ಲಾ ಸ್ತ್ರೀಶಕ್ತಿ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ಜಿಲ್ಲೆಯ ಎಲ್ಲ ಸ್ತ್ರೀಶಕ್ತಿ ಗುಂಪುಗಳ ಮಹಿಳೆಯರಿಗಾಗಿ ಏರ್ಪಡಿಸಿದ್ದ ಮತದಾನ ಜಾಗೃತಿ ಹಾಗೂ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾರುಕಟ್ಟೆಯಲ್ಲಿ ನಮಗೆ ಬೇಕಾದ ವಸ್ತು ಕೊಳ್ಳುವಾಗ ಪರಿಶೀಲಿಸುತ್ತೇವೆ, ಆಲೋಚಿಸುತ್ತೇವೆ, ಹಲವು ಬಾರಿ ಪರೀಕ್ಷಿಸಿದ ನಂತರವೇ ಖರೀದಿಸುವ ನಾವುಗಳು ಇಂದು ನಮ್ಮನಾಳುವ ನಾಯಕರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಉದಾಸೀನತೆ ತೋರುತ್ತಿದ್ದೇವೆ. ಇದರಲ್ಲೂ ಪ್ರಜ್ಞಾವಂತರೇ ಮತದಾನದಿಂದ ದೂರ ಉಳಿಯುತ್ತಿರುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಮಾನವಾಗುತ್ತಿದೆ. ವ್ಯವಸ್ಥೆ ಸರಿ ಎಂದು ನೂರು ಬಾರಿ ಟೀಕೆ ಮಾಡುವುದಕ್ಕಿಂತ ಮತದಾನ ಮಾಡಿ ವ್ಯವಸ್ಥೆ ಸರಿಪಡಿಸೋ ನಿಟ್ಟಿನಲ್ಲಿ ಇಂದು ಎಲ್ಲರೂ ಯೋಚಿಸಬೇಕಿದೆ ಎಂದರು.

ಮಹಿಳೆಯೂ ತನ್ನ ಮಗುವಿಗೆ ಉತ್ತಮ ಸಂಸ್ಕಾರ ಹಾಗೂ ಶಿಕ್ಷ ಣ ನೀಡಬೇಕು. ಮಕ್ಕಳಿಗೆ ಸರಿಯಾದ ಮಾರ್ಗ ತೋರಿಸುವುದು ಹಾಗೂ ಜೀವನದ ಮೌಲ್ಯ ತಿಳಿಸುವುದು ಕೂಡ ಮಾತೆಯರ ಜವಾಬ್ದಾರಿ. ಮಹಿಳೆಯರು ತಮ್ಮ ಮೇಲಾಗುವ ದೌರ್ಜನ್ಯ ಹಾಗೂ ಕಿರುಕುಳಗಳಿಗೆ ಸಕಾಲಿಕ ಪರಿಹಾರ ಕಂಡುಕೊಳ್ಳಲು, ಸಮಸ್ಯೆ, ಸವಾಲುಗಳ ಪರಿಹಾರ ಕಂಡುಕೊಳ್ಳಲು ಇರುವ ಮಹಿಳಾ ಕಾನೂನು, ಕಾಯ್ದೆ ಬಗ್ಗೆ ತಿಳುವಳಿಕೆ ಹೊಂದಿರಬೇಕು. ಅರಿಯದೇ ಮಾಡುವ ಪ್ರಮಾದಗಳಿಗೆ ಕಾನೂನಲ್ಲಿ ಕ್ಷ ಮೆ ಇಲ್ಲ ಎಂದರು.

ಈ ಸಂದರ್ಭ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ‍್ಯದರ್ಶಿ ಸೋಮಶೇಖರ ಸಿ.ಬಾದಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಮತ್ತಿತರು ಇದ್ದರು.


ದೌರ್ಜನ್ಯದಲ್ಲಿ ಶಿವಮೊಗ್ಗಕ್ಕೆ 2ನೇ ಸ್ಥಾನ

ನಗರ ಮತ್ತು ಗ್ರಾಮೀಣ ಪ್ರದೇಶಗಳ ನೊಂದ ಮಹಿಳೆಯರಿಗೆ ದೊರೆಯುವ ಸೌಲಭ್ಯ, ಕಾರ್ಯಕ್ರಮ ಬಗ್ಗೆ ತಿಳಿದಿರಬೇಕಾದ ಅಗತ್ಯವಿದೆ. ಪೋಷಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷ ಣ ನೀಡಿದರೆ ಅಪರಾಧಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಬಹುದು. ವಿಶೇಷವಾಗಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಾತೆಯರ ಪಾತ್ರ ಮಹತ್ವದ್ದಾಗಿದೆ. ಈವರೆಗೆ ರಾಜ್ಯದಲ್ಲಿ ದಾಖಲಾದ ಮಹಿಳಾ ದೌರ್ಜನ್ಯಗಳಲ್ಲಿ ಬೆಂಗಳೂರು ನಂತರದಲ್ಲಿ ಶಿವಮೊಗ್ಗ ಸ್ಥಾನ ಪಡೆದಿರುವುದು ಬೇಸರದ ಸಂಗತಿ.

-ಪ್ರಭಾವತಿ ಎಂ.ಹಿರೇಮಠ್‌, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ