ಆ್ಯಪ್ನಗರ

ನಾಲ್ಕು ದಿನದ ಮಗು ಗಂಭೀರ; ಶಿವಮೊಗ್ಗದಿಂದ ಮಣಿಪಾಲ ಆಸ್ಪತ್ರೆಗೆ ಝೀರೊ ಟ್ರಾಫಿಕ್‌ ವ್ಯವಸ್ಥೆಯಡಿ ಶಿಫ್ಟ್‌

ಶಿವಮೊಗ್ಗ ಪೊಲೀಸರು ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ಪುನಃ ಸಾರ್ವಜನಿಕ ಮೆಚ್ಚುಗೆ ಗಳಿಸಿದರು. ಪೊಲೀಸರ ಈ ನೆರವಿನಿಂದ ಅತಿ ಕಡಿಮೆ ಸಮಯದಲ್ಲಿ ಮಣಿಪಾಲ ಆಸ್ಪತ್ರೆಗೆ ತೆರಳಲು ಸಾಧ್ಯವಾಯಿತು.

Vijaya Karnataka Web 29 Jul 2020, 5:19 pm
ಶಿವಮೊಗ್ಗ: ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿದ್ದ ನಾಲ್ಕು ದಿನದ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಬೇಕಾಯಿತು. ಈ ಸಂದರ್ಭದಲ್ಲಿ ಪೊಲೀಸರು ಝೀರೊ ಟ್ರಾಫಿಕ್‌ ವ್ಯವಸ್ಥೆ ಮಾಡಿ ಸಾರ್ವಜನಿಕ ಮೆಚ್ಚುಗೆಗೆ ಪಾತ್ರರಾದರು.
Vijaya Karnataka Web ಮಗು ರವಾನೆ
ಮಗು ರವಾನೆ


ಕೇವಲ ನಾಲ್ಕು ದಿನದ ಮಗುಗೆ ಬಿಳಿ ರಕ್ತ ಕಣಗಳು ಹೆಚ್ಚಾಗಿ, ಸೋಂಕು ಹರಡುವ ಭೀತಿ ಇತ್ತು.

ಭದ್ರಾವತಿಯ ಅಶ್ವತ್ಥ ನಗರದ ದೇವೇಂದ್ರಪ್ಪ, ಸುಪ್ರಿಯಾ ದಂಪತಿಯ ನಾಲ್ಕು ದಿನದ ನವಜಾತ ಶಿಶುವಿಗೆ ಬಿಳಿ ರಕ್ತ ಕಣಗಳು ಹೆಚ್ಚಿವೆ. ಬ್ಲಡ್ ಇನ್‍ಫೆಕ್ಷನ್ ಇರುವ ಕುರಿತು ವೈದ್ಯರು ತಿಳಿಸಿದ್ದರು.

ಕೂಡಲೇ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು.

ರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ತುರ್ತು ಚಿಕಿತ್ಸೆ ಅಗತ್ಯವಿದ್ದು, ನವಜಾತ ಶಿಶುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿಕೊಳ್ಳಲಾಯಿತು.

ಝೀರೊ ಟ್ರಾಫಿಕ್‌


ತುರ್ತಾಗಿ ಮಣಿಪಾಲಕ್ಕೆ ಕರೆದೊಯ್ಯಬೇಕಿದ್ದರಿಂದ ಜೀರೋ ಟ್ರಾಫಿಕ್‍ ವ್ಯವಸ್ಥೆ ಕಲ್ಪಿಸುವಂತೆ ಪೋಷಕರು ಜಿಲ್ಲಾ ರಕ್ಷಣಾಧಿಕಾರಿ ಅವರಲ್ಲಿ ಮನವಿ ಮಾಡಿದರು.

ಈ ಹಿನ್ನೆಲೆ ಮಗು ಇದ್ದ ಆಂಬ್ಯುಲೆನ್ಸ್‌ಗೆ ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದರು. ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆಯನ್ನೂ ಮಾಡಿದ್ದರು.

ಇದಕ್ಕಾಗಿ ಶಿವಮೊಗ್ಗ ಪೊಲೀಸರು ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ಪುನಃ ಸಾರ್ವಜನಿಕ ಮೆಚ್ಚುಗೆ ಗಳಿಸಿದರು. ಪೊಲೀಸರ ಈ ನೆರವಿನಿಂದ ಅತಿ ಕಡಿಮೆ ಸಮಯದಲ್ಲಿ ಮಣಿಪಾಲ ಆಸ್ಪತ್ರೆಗೆ ತೆರಳಲು ಸಾಧ್ಯವಾಯಿತು.

ಈಗ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ