ಆ್ಯಪ್ನಗರ

ಜೂಜು: ನಾಲ್ವರ ಬಂಧನ

ಪಟ್ಟಣದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಸ್ಥಳಕ್ಕೆ ಪ್ರತ್ಯೇಕ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಶುಕ್ರವಾರ ಬಂಧಿಸಿ ಕೇಸು ದಾಖಲಿಸಿದ್ದಾರೆ.

Vijaya Karnataka 6 Jan 2019, 5:00 am
ಹೊಳೆಹೊನ್ನೂರು: ಪಟ್ಟಣದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಸ್ಥಳಕ್ಕೆ ಪ್ರತ್ಯೇಕ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಶುಕ್ರವಾರ ಬಂಧಿಸಿ ಕೇಸು ದಾಖಲಿಸಿದ್ದಾರೆ.
Vijaya Karnataka Web gambling four arrested
ಜೂಜು: ನಾಲ್ವರ ಬಂಧನ


ಪಟ್ಟಣದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಮಟ್ಕಾ ಹಾವಳಿ ಬಗ್ಗೆ ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ ಮಟ್ಕಾ ಅಡ್ಡೆ ಮೇಲೆ ದಾಳಿ ನಡೆಸಿ ಕನ್ನೇಕೊಪ್ಪ ವಾಸಿ ಟಿ.ಆರ್‌.ತಿಪ್ಪೇಶ್‌ ಹಾಗೂ ಕೊಪ್ಪ ಗ್ರಾಮದ ದೇವೇಂದ್ರ ಹಾಗೂ ಶನಿವಾರ ಮತ್ತೊಂದು ಅಡ್ಡೆ ಮೇಲೆ ದಾಳಿ ನಡೆಸಿ ಹೊನ್ನೂರಮ್ಮ ನಗರದ ಪೆಟ್ಟಿಗೆ ಶಿವು ಹಾಗೂ ಎ.ಕೆ.ಕಾಲೋನಿ ಚಂದ್ರಪ್ಪ ಅವರನ್ನು ಬಂಧಿಸಿದ್ದಾರೆ. ಶಿವುನಿಂದ 1,450 ರೂ. ಹಾಗೂ ಚಂದ್ರಪ್ಪನಿಂದ 1,840 ರೂ. ಅಮಾನತು ಪಡಿಸಿಕೊಂಡಿದ್ದು ಮೊಕದ್ದಮೆ ದಾಖಲಿಸಿದ್ದಾರೆ. ಗ್ರಾಮಾಂತರ ವೃತ್ತ ನಿರೀಕ್ಷ ಕ ಯೋಗೇಶ್‌ ನೇತೃತ್ವದಲ್ಲಿ ಸಿಬ್ಬಂದಿ ಪ್ರಕಾಶ್‌ನಾಯ್ಕ, ಕೆ.ಎಸ್‌.ಕೃಷ್ಣಮೂರ್ತಿ, ಮಂಜುನಾಥ್‌, ಅಣ್ಣಪ್ಪ ಹಾಗೂ ಕುಬೇರ ನಾಯ್ಕ ಅವರು ದಾಳಿ ಕಾರಾರ‍ಯಚರಣೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ