ಹೊಸನಗರ: ಮಹಾತ್ಮಾ ಗಾಂಧೀಜಿ ಅವರ ಚಿಂತನೆಗಳನ್ನು ಜೀವನದಲ್ಲಿಅಳವಡಿಸಿಕೊಳ್ಳಲು ಯುವಸಮೂಹ ಮುಂದಾಗಬೇಕೆಂದು ತಹಸೀಲ್ದಾರ್ ಶ್ರೀಧರಮೂರ್ತಿ ಹೇಳಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿಬುಧವಾರ ಏರ್ಪಡಿಸಿದ್ದ ಮಹಾತ್ಮಾ ಗಾಂಧಿ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾತಂತ್ರತ್ರ್ಯ ಹೋರಾಟ, ಸತ್ಯ, ಧರ್ಮ, ನ್ಯಾಯ ಪಾಲನೆಗಾಗಿ ಗಾಂಧೀಜಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಸಮಾಜ ಸೇವೆಯೇ ತಮ್ಮ ಪರಮೋಚ್ಛ ಗುರಿಯಾಗಿಸಿಕೊಂಡರು. ಇಂತಹ ಆದರ್ಶಮಯ ವ್ಯಕ್ತಿತ್ವ ಹೊಂದಿದ ಕಾರಣಕ್ಕಾಗಿಯೇ ಗಾಂಧೀಜಿ ವಿಶ್ವಮಟ್ಟದಲ್ಲಿಪ್ರಸಿದ್ಧರಾಗಿದ್ದಾರೆ ಎಂದರು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಿಹಿ ವಿತರಿಸಲಾಯಿತು. ತಾಲೂಕು ಕಚೇರಿ ಸಿಬ್ಬಂದಿ ಇದ್ದರು.
ತಾಲೂಕು ಕಚೇರಿ ಸಭಾಂಗಣದಲ್ಲಿಬುಧವಾರ ಏರ್ಪಡಿಸಿದ್ದ ಮಹಾತ್ಮಾ ಗಾಂಧಿ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾತಂತ್ರತ್ರ್ಯ ಹೋರಾಟ, ಸತ್ಯ, ಧರ್ಮ, ನ್ಯಾಯ ಪಾಲನೆಗಾಗಿ ಗಾಂಧೀಜಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಸಮಾಜ ಸೇವೆಯೇ ತಮ್ಮ ಪರಮೋಚ್ಛ ಗುರಿಯಾಗಿಸಿಕೊಂಡರು. ಇಂತಹ ಆದರ್ಶಮಯ ವ್ಯಕ್ತಿತ್ವ ಹೊಂದಿದ ಕಾರಣಕ್ಕಾಗಿಯೇ ಗಾಂಧೀಜಿ ವಿಶ್ವಮಟ್ಟದಲ್ಲಿಪ್ರಸಿದ್ಧರಾಗಿದ್ದಾರೆ ಎಂದರು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಿಹಿ ವಿತರಿಸಲಾಯಿತು. ತಾಲೂಕು ಕಚೇರಿ ಸಿಬ್ಬಂದಿ ಇದ್ದರು.