ಆ್ಯಪ್ನಗರ

11ರಂದು ಗಂಗಾ ಜಯಂತ್ಯುತ್ಸವ

ಇಲ್ಲಿನ ಭೀಮನಕೋಣೆ ರಸ್ತೆಯ ಗಾಂಧಿನಗರದಲ್ಲಿ ಶ್ರೀಗಂಗಾಮತ ಸಮಾಜ ಸುಮಾರು 85 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀಗಂಗಾಪರಮೇಶ್ವರಿ ಸಮುದಾಯ ಭವನ ಲೋಕಾರ್ಪಣೆ ಮತ್ತು ಗಂಗಾ ಜಯಂತ್ಯುತ್ಸವ ಕಾರ್ಯಕ್ರಮವನ್ನು ಮೇ 11ರಂದು ಹಮ್ಮಿಕೊಳ್ಳಲಾಗಿದೆ ಎಂದು ಗಂಗಾ ಪರಮೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್‌.ವಿ.ಕೃಷ್ಣಮೂರ್ತಿ ತಿಳಿಸಿದರು.

Vijaya Karnataka 8 May 2019, 5:00 am
ಸಾಗರ : ಇಲ್ಲಿನ ಭೀಮನಕೋಣೆ ರಸ್ತೆಯ ಗಾಂಧಿನಗರದಲ್ಲಿ ಶ್ರೀಗಂಗಾಮತ ಸಮಾಜ ಸುಮಾರು 85 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀಗಂಗಾಪರಮೇಶ್ವರಿ ಸಮುದಾಯ ಭವನ ಲೋಕಾರ್ಪಣೆ ಮತ್ತು ಗಂಗಾ ಜಯಂತ್ಯುತ್ಸವ ಕಾರ್ಯಕ್ರಮವನ್ನು ಮೇ 11ರಂದು ಹಮ್ಮಿಕೊಳ್ಳಲಾಗಿದೆ ಎಂದು ಗಂಗಾ ಪರಮೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್‌.ವಿ.ಕೃಷ್ಣಮೂರ್ತಿ ತಿಳಿಸಿದರು.
Vijaya Karnataka Web ganga jayanti festival on 11th
11ರಂದು ಗಂಗಾ ಜಯಂತ್ಯುತ್ಸವ


ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಹಾವೇರಿ ಜಿಲ್ಲೆ ನರಸೀಪುರದ ಕಂಚರಗತ್ತಿಯ ಶ್ರೀಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಮೇ 11ರ ಬೆಳಗ್ಗೆ 11ಕ್ಕೆ ಸಮುದಾಯ ಭವನ ಲೋಕಾರ್ಪಣೆ ನೆರವೇರಿಸಲಿದ್ದಾರೆ. 11.30ಕ್ಕೆ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಸಭಾ ಕಾರ್ಯಕ್ರಮವಿದ್ದು, ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಮಧ್ಯಾಹ್ನ 1ಕ್ಕೆ ಸಾಮೂಹಿಕ ಅನ್ನಸಂತರ್ಪಣೆ, ರಾತ್ರಿ 7ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಸಮುದಾಯ ಭವನ ಸಮಿತಿ ಅಧ್ಯಕ್ಷ ಲಕ್ಷ ್ಮಣ ಮಾಗಡಿ ಅಧ್ಯಕ್ಷತೆ ವಹಿಸಲಿದ್ದು, ನಾಡೋಜ ಡಾ. ಜಿ.ಶಂಕರ್‌, ಬಾಬುರಾವ್‌ ಜಮಾದಾರ್‌, ಮಂಜುನಾಥ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಕುಮಾರ್‌, ಬೆಂಗಳೂರು ಸಹಕಾರ ಸಂಘಗಳ ನಿಬಂಧಕ ಕೆ.ಆರ್‌.ಧರ್ಮಪ್ಪ, ಇಕ್ಕೇರಿ ರಾಮಣ್ಣ, ಎಸ್‌.ವಿ.ಕೃಷ್ಣಮೂರ್ತಿ, ಎ.ಹಾಲೇಶಪ್ಪ, ಜೆ.ಭೀಮಣ್ಣ, ನಾಗರಾಜ್‌ , ಡಿ.ಬಿ.ಕೆಂಚಪ್ಪ ಮತ್ತಿತರರು ಉಪಸ್ಥಿತರಿರುವರು ಎಂದು ಹೇಳಿದರು.

ಸಮುದಾಯ ಭವನ ಸಮಿತಿ ಅಧ್ಯಕ್ಷ ಲಕ್ಷ ್ಮಣ ಮಾಗಡಿ, ಕಾರ್ಯಕ್ರಮ ಸಂಚಾಲಕ ಶಿವಾನಂದ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ