ಆ್ಯಪ್ನಗರ

ಸಕಾಲಕ್ಕೆ ರೈತರ ಬೆಳೆ ನಷ್ಟ ಪರಿಹಾರ ಪಾವತಿಸಿ

ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿ ಇರುವುದರಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವ ಜತೆಗೆ ಬೆಳೆ ನಷ್ಟ ಸಂತ್ರಸ್ತ ರೈತರ ಪರಿಹಾರವನ್ನು ಸಕಾಲಕ್ಕೆ ಪಾವತಿಸುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ.

Vijaya Karnataka 23 May 2019, 5:00 am
ಶಿವಮೊಗ್ಗ : ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿ ಇರುವುದರಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವ ಜತೆಗೆ ಬೆಳೆ ನಷ್ಟ ಸಂತ್ರಸ್ತ ರೈತರ ಪರಿಹಾರವನ್ನು ಸಕಾಲಕ್ಕೆ ಪಾವತಿಸುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ.
Vijaya Karnataka Web give compensation to farmers
ಸಕಾಲಕ್ಕೆ ರೈತರ ಬೆಳೆ ನಷ್ಟ ಪರಿಹಾರ ಪಾವತಿಸಿ


ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸಬೇಕು. ಹೊಸ ಕೊಳವೆಬಾವಿ ಕೊರೆಯುವ ಬದಲು ಖಾಸಗಿ ಕೊಳವೆಬಾವಿಗಳನ್ನು ಪಡೆಯಲು ಆದ್ಯತೆ ನೀಡಬೇಕು. ಕುಡಿಯುವ ನೀರಿನ ಬಾಕಿ ಬಿಲ್ಲನ್ನು ಪ್ರತಿ 15 ದಿನಗಳಿಗೊಮ್ಮೆ ಕಡ್ಡಾಯವಾಗಿ ಪಾವತಿಸಬೇಕು. ಕುಡಿಯುವ ನೀರಿನ ದುರುಪಯೋಗ ತಡೆಗಟ್ಟಲು ನೀರು ಸರಬರಾಜು ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಜಿಪಿಎಸ್‌ ಅಳವಡಿಸುವಂತೆ ಅವರು ಸೂಚಿಸಿದ್ದಾರೆ.

ಜಿಲ್ಲೆಗಳಲ್ಲಿ ಮೇವು ಬ್ಯಾಂಕ್‌ ತೆರೆಯಲು ಆದ್ಯತೆ ನೀಡುವುದು, ಸರಕಾರೇತರ ಸಂಸ್ಥೆಗಳು ಗೋಶಾಲೆ ತೆರೆಯಲು ಮುಂದೆ ಬಂದಲ್ಲಿ ಪ್ರೋತ್ಸಾಹಿಸುವುದು, ಹಸಿರು ಮೇವು ಬೆಳೆಸುವ ಸಲುವಾಗಿ ವಿತರಿಸಿದ ಮಿತಿ ಕಿಟ್‌ನ ಸಮರ್ಪಕ ಬಳಕೆ ಬಗ್ಗೆ ಪರಿಶೀಲಿಸುವುದು, ಜನ ಗುಳೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಸೂಕ್ತ ಉದ್ಯೋಗ ಸೃಜನೆ, ಸಕಾಲಿಕ ವೇತನ ಪಾವತಿ ಸೇರಿದಂತೆ ಎಲ್ಲ ಪರಿಹಾರ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.

ಹಸಿರು ಮೇವಿನ ಖರೀದಿ ದರ ಪ್ರತಿ ಟನ್‌ಗೆ ಈಗಿರುವ ರೂ. 1,500 ರಿಂದ 3 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಕುರಿ ಮತ್ತು ಮೇಕೆಗಳಿಗೆ ಜಂತುನಾಶಕ ಮತ್ತು ಲವಣ ಮಿಶ್ರಣ ಔಷಧಿ ಖರೀದಿಗಾಗಿ 5 ಕೋಟಿ ರೂ.ಅನುದಾನ, ಅಂತರಾಜ್ಯ ಮೇವು ಸಾಗಣೆಗೆ ಜುಲೈ 31ರವರೆಗೆ ನಿಬಂಧ, ವಿಜಯಪುರ ಜಿಲ್ಲೆಗೆ ತುರ್ತು ಬರ ಪರಿಹಾರ ಕ್ರಮಗಳಿಗಾಗಿ ಎಸ್‌ಡಿಆರ್‌ಎಫ್‌ ನಿಧಿಯಿಂದ 10 ಕೋಟಿ ರೂ.ಅನುದಾನ ಬಿಡುಗಡೆ. ಬಾಗಲಕೋಟೆ ಜಿಲ್ಲೆಯಲ್ಲಿನ ಬ್ಯಾರೇಜ್‌ ಗೇಟ್‌ ನಿರ್ವಹಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ 15 ಲಕ್ಷ ರೂ.ಅನುದಾನ ನೀಡಲಾಗಿದೆ. ಬೆಳೆಹಾನಿ ಹೊಂದಿರುವ ಜಮೀನಿನ ರೈತರು ಮರಣ ಹೊಂದಿದ್ದಲ್ಲಿ, ಫಲಾನುಭವಿ ರೈತರ ಸಕ್ಷ ಮ ವಾರಸುದಾರರಿಗೆ ಹಾಗೂ ಜಮೀನು ಜಂಟಿ ಖಾತೆಯಿದ್ದಲ್ಲಿ, ತನಿಖೆ ನಡೆಸಿ ಅರ್ಹ ಫಲಾನುಭವಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ವಿತರಿಸುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲು ಸಂಬಂಧಪಟ್ಟ ತಹಸೀಲ್ದಾರ್‌ಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೃಷಿ ಇಲಾಖೆಯು ಬಿತ್ತನೆ ಬೀಜ, ಗೊಬ್ಬರಗಳನ್ನು ಸಾಕಷ್ಟು ದಾಸ್ತಾನು ಇಟ್ಟುಕೊಂಡು ಮುಂಬರುವ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್‌. ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ