ಆ್ಯಪ್ನಗರ

ಜೆಡಿಎಸ್‌ ಅಭ್ಯರ್ಥಿಗಳಿಗೆ ಅದ್ಯತೆ ನೀಡಿ

ವಿಧಾನಪರಿಷತ್‌ ನೈಋುತ್ಯ ಪದವೀಧರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಅರುಣ್‌ ಕುಮಾರ್‌ ಹಾಗೂ ಶಿಕ್ಷ ಕರ ಕ್ಷೇತ್ರದ ಪಕ್ಷ ದ ಅಭ್ಯರ್ಥಿ ಬೋಜೇಗೌಡ ಅವರಿಗೆ ಬೆಂಬಲ ನೀಡುವಂತೆ ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಕೆ.ಟಿ.ಶ್ರೀಕಂಠೇಗೌಡ ಮನವಿ ಮಾಡಿದರು.

Vijaya Karnataka Web 1 Jun 2018, 5:00 am
ಶಿವಮೊಗ್ಗ : ವಿಧಾನಪರಿಷತ್‌ ನೈಋುತ್ಯ ಪದವೀಧರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಅರುಣ್‌ ಕುಮಾರ್‌ ಹಾಗೂ ಶಿಕ್ಷ ಕರ ಕ್ಷೇತ್ರದ ಪಕ್ಷ ದ ಅಭ್ಯರ್ಥಿ ಬೋಜೇಗೌಡ ಅವರಿಗೆ ಬೆಂಬಲ ನೀಡುವಂತೆ ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಕೆ.ಟಿ.ಶ್ರೀಕಂಠೇಗೌಡ ಮನವಿ ಮಾಡಿದರು.
Vijaya Karnataka Web give preference to jds candidate
ಜೆಡಿಎಸ್‌ ಅಭ್ಯರ್ಥಿಗಳಿಗೆ ಅದ್ಯತೆ ನೀಡಿ


ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಹಾಗೂ ಶಿಕ್ಷ ಕರ ಕ್ಷೇತ್ರದ ಪಕ್ಷ ದ ಅಭ್ಯರ್ಥಿಗಳು ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋಲು ಕಂಡಿದ್ದರು. ಈ ಬಾರಿ ಗೆಲಲ್ಲೇ ಬೇಕು ಎಂದು ಪಣ ತೊಟ್ಟ ಅಭ್ಯರ್ಥಿಗಳು ಕಳೆದ ಒಂದು ವರ್ಷದಿಂದ ಪ್ರಚಾರದಲ್ಲಿ ತೊಡಗಿ ಮತದಾರರ ವಿಶ್ವಾಸ ಗಳಿಸಿದ್ದಾರೆ. ಇದರಿಂದ ಅವರ ಗೆಲುವು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿಕ್ಷ ಕರ ಕ್ಷೇತ್ರದ ಅಭ್ಯರ್ಥಿ ಎಸ್‌.ಎಲ್‌.ಭೋಜೇಗೌಡ ಶಿಕ್ಷ ಕರ ಹೋರಾಟಗಳಲ್ಲಿ ಭಾಗವಹಿಸಿ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಇವರಿಗೆ ಶಿಕ್ಷ ಕರು ಪ್ರಥಮ ಪ್ರಾಶಸ್ತ್ಯ ಮತ ನೀಡುವುದರ ಮೂಲಕ ಆಯ್ಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿ ಅವರು ಶಿಕ್ಷ ಕರ ಹಾಗೂ ಪದವೀಧರರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದು, ಈಗ ಮತ್ತೆ ಅವರು ಮುಖ್ಯಮಂತ್ರಿಯಾಗಿದ್ದು ಗುತ್ತಿಗೆ ಶಿಕ್ಷ ಕರ ಸಮಸ್ಯೆಗೆ ಶಾಶ್ವತ ಪರಿಹಾರ ಹಾಗೂ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಖಾಲಿ ಹುದ್ದೆಗಳ ಭರ್ತಿ ಹೀಗೆ ಶಿಕ್ಷ ಕರ ಹಾಗೂ ಪದವೀಧರರ ಸಮಸ್ಯೆಗಳು ಬಗೆಹರಿಯುವುದರಿಂದ ಶಿಕ್ಷ ಕರು ಹಾಗೂ ಪದವೀಧರರು ಜೆಡಿಎಸ್‌ ಪಕ್ಷ ದ ಅಭ್ಯರ್ಥಿಗಳಿಗೆ ಆಶೀರ್ವದಿಸಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿಕೊಂಡರು.

ಮೇಯರ್‌ ನಾಗರಾಜ್‌ ಕಂಕಾರಿ ಮಾತನಾಡಿ, ಚುನಾವಣೆಗೆ ಒಂದು ವರ್ಷ ಹಿಂದಿನಿಂದಲೇ ಜೆಡಿಎಸ್‌ ಕಾರ್ಯಕರ್ತರು ತಯಾರಿ ಮಾಡಿಕೊಂಡಿದ್ದರು. ಕಳೆದ ಬಾರಿ ಪಕ್ಷ ದ ಅಭ್ಯರ್ಥಿಗಳು ಅಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ ಬಾರಿ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಉದ್ದೇಶದಿಂದ ಮತದಾರರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ನಡೆಸಲಾಗಿದೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ಗೋಷ್ಠಿಯಲ್ಲಿ ನೈಋುತ್ಯ ಪದವೀಧರರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಅರುಣ್‌ ಕುಮಾರ್‌, ಪಕ್ಷ ದ ಮುಖಂಡರಾದ ಸುಬ್ಬೇಗೌಡ, ತ್ಯಾಗರಾಜ್‌, ರಾಮಕೃಷ್ಣ, ಸಿದ್ದಪ್ಪ ಮತ್ತಿತರು ಇದ್ದರು.

---------

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ