ಆ್ಯಪ್ನಗರ

ತರಗನಹಳ್ಳಿಯಲ್ಲಿ ಸ್ಮಶಾನ ಜಾಗ ನೀಡಿ

ತಾಲೂಕಿನ ತಗನಹಳ್ಳಿಯಲ್ಲಿ ಸ್ಮಶಾನಕ್ಕೆ ಜಾಗ ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಶಿವಮೊಗ್ಗ-ಹೊಳೆಹೊನ್ನೂರು ರಸ್ತೆಯ ಬಿ.ಬೀರನಹಳ್ಳಿ ಕ್ರಾಸ್‌ನಲ್ಲಿ ಶವವಿಟ್ಟು ಸೋಮವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು.

Vijaya Karnataka 26 Feb 2019, 5:00 am
ಶಿವಮೊಗ್ಗ: ತಾಲೂಕಿನ ತಗನಹಳ್ಳಿಯಲ್ಲಿ ಸ್ಮಶಾನಕ್ಕೆ ಜಾಗ ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಶಿವಮೊಗ್ಗ-ಹೊಳೆಹೊನ್ನೂರು ರಸ್ತೆಯ ಬಿ.ಬೀರನಹಳ್ಳಿ ಕ್ರಾಸ್‌ನಲ್ಲಿ ಶವವಿಟ್ಟು ಸೋಮವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು.
Vijaya Karnataka Web SMG-2502-2-15-25SMG6


ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್‌ ನಾಯ್ಕ್‌, ಪ್ರತಿಭಟನಾನಿರತರನ್ನು ಸಮಾಧಾನಪಡಿಸಲು ಯತ್ನಿಸಿದರು. ಕಂದಾಯ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡು, ಒಂದು ವಾರದಲ್ಲಿ ಸ್ಮಶಾಭೂಮಿಗೆ ಜಾಗ ನಿಗದಿಪಡಿಸುವಂತೆ ಸೂಚಿಸಿದರು. ಆ ಬಳಿಕ, ಪ್ರತಿಭಟನೆ ಹಿಂಪಡೆಯಲಾಯಿತು. ಕೂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತರಗನಹಳ್ಳಿಯಲ್ಲಿ ಸ್ಮಾಶನಕ್ಕೆ ಜಾಗವಿಲ್ಲ. ಈ ಸಂಬಂಧ ಕೆಲ ವರ್ಷಗಳ ಹಿಂದೆ ಪ್ರತಿಭಟನೆ ನಡೆಸಿದಾಗ, ಸ್ಮಾಶಕ್ಕೆ ಜಾಗ ನೀಡುವಂತೆ ಸೂಚಿಸಲಾಗಿತ್ತು. ಆದರೆ, ಕಂದಾಯ ಇಲಾಖೆ ಜಾಗ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ