ಆ್ಯಪ್ನಗರ

ಜ್ಞಾನಾರ್ಜನೆಗೆ ಸಮಯ ಮೀಸಲಿಡಿ

ವಿದ್ಯಾರ್ಥಿಗಳು ಮೊಬೈಲ್‌ ಬಳಕೆ ಮತ್ತು ಟಿವಿ ವೀಕ್ಷ ಣೆಯಲ್ಲೇ ಹೆಚ್ಚಿನ ಸಮಯ ಕಳೆಯುವುದರಿಂದ ಜೀವನದ ಅಮೂಲ್ಯ ಸಮಯ ವ್ಯರ್ಥಮಾಡುತ್ತಿದ್ದಾರೆ ಎಂದು ಬೊಮ್ಮನಕಟ್ಟೆ ಸರ್‌.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಮೂರ್ತಿ ಹೇಳಿದರು.

Vijaya Karnataka 28 Jul 2019, 5:00 am
ಭದ್ರಾವತಿ: ವಿದ್ಯಾರ್ಥಿಗಳು ಮೊಬೈಲ್‌ ಬಳಕೆ ಮತ್ತು ಟಿವಿ ವೀಕ್ಷ ಣೆಯಲ್ಲೇ ಹೆಚ್ಚಿನ ಸಮಯ ಕಳೆಯುವುದರಿಂದ ಜೀವನದ ಅಮೂಲ್ಯ ಸಮಯ ವ್ಯರ್ಥಮಾಡುತ್ತಿದ್ದಾರೆ ಎಂದು ಬೊಮ್ಮನಕಟ್ಟೆ ಸರ್‌.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಮೂರ್ತಿ ಹೇಳಿದರು.
Vijaya Karnataka Web SMR-27BDVT2


ಅವರು ಶನಿವಾರ ಬೊಮ್ಮನಕಟ್ಟೆ ಸರಕಾರಿ ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘ ಸಹಯೋಗದಲ್ಲಿ ಏರ್ಪಡಿಸಿದ್ದ ಪತ್ರಿಕಾದಿನಾಚರಣೆ ಉದ್ಘಾಟಿಸಿ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಮೊಬೈಲ್‌ ಮತ್ತು ಟಿವಿ ಬಳಕೆಯಿಂದಾಗಿ ಮಾನವೀಯ ಸ್ನೇಹ, ಸೌಹಾರ್ದ ಸಂಬಂಧ ಮರೆಯಾಗುತ್ತಿವೆ. ಹ್ಯಾಕ್‌ ಮೂಲಕ ಜಗಜ್ಜಾಹೀರುಮಾಡುವ ಅಪಾಯವಿರುವುದರಿಂದ ವಿದ್ಯಾರ್ಥಿಗಳು ವೈಯಕ್ತಿಕ ವಿಷಯ ಫೇಸ್‌ಬುಕ್‌ನಲ್ಲಿ ಹಾಕಬಾರದು. ವಾಟ್ಸ್‌ಆಪ್‌ ಮುಂತಾದ ಸಾಮಾಜಿಕ ಜಾಲತಾಣ ಬಳಕೆ ಮೇಲೂ ಹಿಡಿತ ಹೊಂದುವ ಅಗತ್ಯವಿದೆ. ವಿದ್ಯಾರ್ಥಿಗಳು ನಿತ್ಯ ದಿನಪತ್ರಿಕೆ ಓದುವುದರಿಂದ ಜ್ಞಾನಾರ್ಜನೆಗೆ ಸಹಕಾರಿ ಎಂದರು. ಪ್ರಬಂಧ ಸ್ಪರ್ಧೆ ವಿಜೇತರಾದ ಸಿಂಧು ಜೋಯ್ಸ್‌, ಪ್ರಿಯಾಂಕ, ಮೋಹನ್‌ ಮಾತನಾಡಿದರು.

ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್‌ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಸುನಿತ, ಹಿರಿಯ ಪತ್ರಕರ್ತರಾದ ಕಣ್ಣಪ್ಪ, ಗಣೇಶ್‌ ರಾವ್‌ ಸಿಂಧ್ಯಾ, ಆನಂದಕುಮಾರ್‌ ಇದ್ದರು. ಸಂಘದ ಅಧ್ಯಕ್ಷ ಕೆ.ಎನ್‌.ಶ್ರೀಹರ್ಷ, ಪ್ರಧಾನ ಕಾರ‍್ಯದರ್ಶಿ ಬಸವರಾಜ್‌ ಇತರರು ಭಾಗವಹಿಸಿದ್ದರು. ಅನೂಷ ನಿರೂಪಿಸಿ, ಮಹಾದೇವ್‌ ವಂದಿಸಿದರು. ಇದೇ ಸಂದರ್ಭ ಪತ್ರಕರ್ತ ಎಚ್‌.ಕೆ.ಶಿವಶಂಕರ್‌ ಅವರನ್ನು ಸನ್ಮಾನಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ