ಆ್ಯಪ್ನಗರ

ಮುಳುಗಡೆ ಸಂತ್ರಸ್ತರಿಗೆ ಸರಕಾರದ ಅಭಯ

ಶರಾವತಿ ಮುಳುಗಡೆ ಸಂತ್ರಸ್ತರು, 94ಸಿ, ಬಗರ್‌ಹಕುಂ ಸಾಗುವಳಿದಾರರನ್ನು ಯಾವುದೇ ಕಾರಣಕ್ಕೆ ಒಕ್ಕಲೆಬ್ಬಿಸುವ ಉದ್ದೇಶ ಸರಕಾರಕ್ಕಿಲ್ಲ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

Vijaya Karnataka 14 Feb 2019, 5:00 am
Vijaya Karnataka Web SMR-13HOSP4

ಹೊಸನಗರ: ಶರಾವತಿ ಮುಳುಗಡೆ ಸಂತ್ರಸ್ತರು, 94ಸಿ, ಬಗರ್‌ಹಕುಂ ಸಾಗುವಳಿದಾರರನ್ನು ಯಾವುದೇ ಕಾರಣಕ್ಕೆ ಒಕ್ಕಲೆಬ್ಬಿಸುವ ಉದ್ದೇಶ ಸರಕಾರಕ್ಕಿಲ್ಲ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಕಂದಾಯ, ಅರಣ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಜಂಟಿ ಸಭೆ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ಜಲವಿದ್ಯುತ್‌ ಯೋಜನೆಗಳ ನಿರ್ಮಾಣಕ್ಕಾಗಿ ರೈತರ ಲಕ್ಷಾಂತರ ಎಕರೆ ಕೃಷಿ ಜಮೀನು ಮುಳುಗಡೆಯಾಗಿತ್ತು. ಸಂತ್ರಸ್ತರಿಗೆ ಈ ವರೆಗೂ ಪರಾರ‍ಯಯ ವ್ಯವಸ್ಥೆ ಕಲ್ಪಿಸಿಲ್ಲ. ಕೃಷಿಕರು ಅರಣ್ಯ, ಕಂದಾಯ ಹಾಗೂ ಕೆಪಿಸಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದು, ಈವರೆಗೂ ಭೂಮಿ ಹಕ್ಕು ಪಡೆಯಲು ವಿಫಲರಾಗಿದ್ದಾರೆ. ಅನಧಿಕೃತ ಸಾಗುವಳಿ ಮಾಡಿರುವ ರೈತರನ್ನು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಪ್ರಯತ್ನಗಳು ಪದೇ ಪದೇ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿತ್ತು. ಆದರೆ ಸರಕಾರ ಅನಧಿಕೃತ ಸಾಗುವಳಿದಾರರಿಗೆ ಅಭಯ ನೀಡಿದ್ದು, ಅವರನ್ನು ಒಕ್ಕಲೆಬ್ಬಿಸಬಾರದು ಎಂಬ ಆದೇಶವನ್ನು ಸಚಿವರು ಹೊರಡಿಸಿದ್ದಾರೆ.

ಸಭೆಯಲ್ಲಿ ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ಮಾಜಿ ಸಚಿವ ಎಚ್‌.ಕೆ.ಪಾಟೀಲ್‌, ಶಾಸಕ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಹಾಗೂ ವಿವಿಧ ಇಲಾಖೆ ಉನ್ನತ ಅಧಿಕಾರಿಗಳು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ